September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

ಬೆಳ್ತಂಗಡಿ : ಗೃಹಲಕ್ಷ್ಮಿ ಯೋಜನೆಯಲ್ಲಿನ ತಾಂತ್ರಿಕ ತೊಡಕುಗಳನ್ನು ಕೂಡಲೇ ಸರಿಪಡಿಸಿ, ಎಲ್ಲಾ ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯುವಂತೆ ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಅನೇಕರಿಗೆ ತಾಂತ್ರಿಕ ಕಾರಣದಿಂದ ಮೊದಲ ಕಂತು ಬಂದಿಲ್ಲ. ಉಡುಪಿ ಜಿಲ್ಲೆಯಲ್ಲಿ 2,56,850 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4,03,333 ಕಾರ್ಡ್‌ದಾರರಿದ್ದಾರೆ. ಆಗಸ್ಟ್ 15ಕ್ಕೂ ಮೊದಲು ಉಡುಪಿ ಜಿಲ್ಲೆಯಲ್ಲಿ 2,03,367 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3,15,726 ಕಾರ್ಡ್‌ದಾರರು ಯೋಜನೆಗೆ ಅರ್ಜಿ ಸಲ್ಲಿಸಿದ್ದರು. ಇವರಲ್ಲಿ ಉಡುಪಿ ಜಿಲ್ಲೆಯಲ್ಲಿ 1,79,951 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2,83,392 ಕಾರ್ಡ್ ದಾರರಿಗೆ ಯೋಜನೆಯ ಮೊದಲ ಕಂತು ಬಂದಿದೆ. ಉಡುಪಿ ಜಿಲ್ಲೆಯಲ್ಲಿ 23,416 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 32,334 ಕಾರ್ಡ್‌ದಾರರಿಗೆ ತಾಂತ್ರಿಕ ಕಾರಣದಿಂದ ಯೋಜನೆಯ ಮೊದಲ ಕಂತು ಸಿಕ್ಕಿಲ್ಲ. ಆಗಸ್ಟ್ 15ರ ಮೊದಲು ಅರ್ಜಿ ಸಲ್ಲಿಸಿ, ಸಮ್ಮತಿ ಪಡೆದಿದ್ದರೂ ತಾಂತ್ರಿಕ ಕಾರಣದಿಂದ ಹಣ ಬಾರದ ಅರ್ಜಿಗಳಿಗೆ ತಾಂತ್ರಿಕ ಸಮಸ್ಯೆ ಬಗೆಹರಿದ ಅನಂತರ ಆಗಸ್ಟ್ ತಿಂಗಳಿನಿಂದಲೇ ಸರ್ಕಾರದ ಯೋಜನೆಯ ಫಲ ಸಿಗಲಿದೆ. ಆದರೆ ಹೊಸ ಅರ್ಜಿ ಅಥವಾ ಸರ್ಕಾರ ಸಮ್ಮತಿಸುವ 2ನೇ ಪಟ್ಟಿಯ ಎಲ್ಲಾ ಫಲಾನುಭವಿಗಳಿಗೆ ಆಗಸ್ಟ್‌ ನಿಂದಲೇ ಪೂರ್ವಾನ್ವಯವಾಗುವಂತೆ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

Related posts

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya

ಪಾಲೇದು ಸ.ಹಿ.ಪ್ರಾ.ಶಾಲೆಯ ಕೊಠಡಿ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪ.ಪೂ. ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya
error: Content is protected !!