Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

ಬೆಳ್ತಂಗಡಿ: ಪ್ರೋ ಕೆ ಎಸ್. ಭಗವಾನ್ ಅವರು ಒಕ್ಕಲಿಗರ ಸಮುದಾಯದವರು ಸಂಸ್ಕೃತಿ ಹೀನ ಪಶುಗಳು ಎಂಬ ಕುಚೋದ್ಯದ ಹೇಳಿಕೆಯನ್ನು ನೀಡಿ ಒಕ್ಕಲಿಗರ ಸಮುದಾಯವನ್ನು ಅವಮಾನಿಸಿರುವುದು ಅತ್ಯಂತ ಖಂಡನೀಯ ಸಂಗತಿ. ಈ ಹೇಳಿಕೆಯು ಅವರ ಮಾನಸಿಕ ಅಸ್ವಸ್ಥತೆಯನ್ನು ಸೂಚಿಸುತ್ತದೆ. ಮತಿಭ್ರಮಣೆಗೊಂಡು ಆಡಿದ ಮಾತುಗಳು ಸಾಮಾಜಿಕ ದುಷ್ಪಾರಿಣಾಮಕ್ಕೆ ಕಾರಣವಾಗುತ್ತದೆ ಎಂಬ ಸಾಮಾನ್ಯ ಜ್ಞಾನ ಶ್ರೀ ಭಗವಾನ್‌ಗೆ ಇಲ್ಲದಿರುವುದು ಅತ್ಯಂತ ಖೇದಕರ ಸಂಗತಿಯಾಗಿದೆ.


ನಮ್ಮ ದೇಶದ ಬೆನ್ನೆಲುಬು ರೈತ. ಸಮಸ್ತ ರೈತ ಸಮುದಾಯವನ್ನು ಒಕ್ಕಲಿಗ ಸಮುದಾಯ ಪ್ರತಿನಿಧಿಸುತ್ತದೆ. ಒಕ್ಕಲುತನ ಸಂಸ್ಕೃತಿಯನ್ನು ಪ್ರತಿಪಾದಿಸಿಕೊಂಡು ಬಂದಿರುವ ಒಕ್ಕಲಿಗ ಸಮುದಾಯದವರು ಈ ದೇಶದ ಮಣ್ಣಿನ ಮಕ್ಕಳು. ನಮ್ಮ ಸಮುದಾಯಕ್ಕೆ ಸೇರಿದ ದೇಶ ಕಂಡ ಮುತ್ಸದ್ಧಿ ಹಿರಿಯ ರಾಜಕಾರಣಿ, ಮಣ್ಣಿನ ಮಗ ದೇವೇಗೌಡರವರು ದೇಶದ ಪ್ರಧಾನ ಮಂತ್ರಿಯಾಗಿ ಈ ದೇಶದ ಕೀರ್ತಿಯನ್ನು ಹೆಚ್ಚಿಸಿದವರು, ವಿಶ್ವ ಮಾನವ ಸಂದೇಶವನ್ನು ಪ್ರಪಂಚಕ್ಕೆ ಸಾರಿದ ರಾಷ್ಟ್ರಕವಿ ಕುವೆಂಪುರವರು ಇದೇ ಸಮುದಾಯದವರು. ಸಾಮಾಜಿಕ ಸಾಂಸ್ಕೃತಿಕ, ಶೈಕ್ಷಣಿಕ, ರಾಜಕೀಯ, ಹಾಗೂ ಆರ್ಥಿಕವಾಗಿ ಈ ಸಮುದಾಯ ದೇಶಕ್ಕೆ ತನ್ನದೇ ಆದ ಅನೇಕ ಕೊಡುಗೆಗಳನ್ನು ನೀಡಿದೆ ಮತ್ತು ನೀಡುತ್ತಿದೆ. ಭಗವಾನ್ ರವರ ಹೇಳಿಕೆಯು ಅಸಮರ್ಥನೀಯ ಅಸಂವಿಧಾನಿಕವಾಗಿದ್ದು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘವು ಅವರ ಹೇಳಿಕೆಯನ್ನು ಖಂಡಿಸುತ್ತದೆ ಮತ್ತು ಸರ್ಕಾರವು ಅವರ ವಿರುದ್ದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅಗ್ರಹಿಸಿದರು.

             

Related posts

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟ ಬಳಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

Suddi Udaya
error: Content is protected !!