July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

ಬೆಳ್ತಂಗಡಿ: ಪ್ರೋ ಕೆ ಎಸ್. ಭಗವಾನ್ ಅವರು ಒಕ್ಕಲಿಗರ ಸಮುದಾಯದವರು ಸಂಸ್ಕೃತಿ ಹೀನ ಪಶುಗಳು ಎಂಬ ಕುಚೋದ್ಯದ ಹೇಳಿಕೆಯನ್ನು ನೀಡಿ ಒಕ್ಕಲಿಗರ ಸಮುದಾಯವನ್ನು ಅವಮಾನಿಸಿರುವುದು ಅತ್ಯಂತ ಖಂಡನೀಯ ಸಂಗತಿ. ಈ ಹೇಳಿಕೆಯು ಅವರ ಮಾನಸಿಕ ಅಸ್ವಸ್ಥತೆಯನ್ನು ಸೂಚಿಸುತ್ತದೆ. ಮತಿಭ್ರಮಣೆಗೊಂಡು ಆಡಿದ ಮಾತುಗಳು ಸಾಮಾಜಿಕ ದುಷ್ಪಾರಿಣಾಮಕ್ಕೆ ಕಾರಣವಾಗುತ್ತದೆ ಎಂಬ ಸಾಮಾನ್ಯ ಜ್ಞಾನ ಶ್ರೀ ಭಗವಾನ್‌ಗೆ ಇಲ್ಲದಿರುವುದು ಅತ್ಯಂತ ಖೇದಕರ ಸಂಗತಿಯಾಗಿದೆ.


ನಮ್ಮ ದೇಶದ ಬೆನ್ನೆಲುಬು ರೈತ. ಸಮಸ್ತ ರೈತ ಸಮುದಾಯವನ್ನು ಒಕ್ಕಲಿಗ ಸಮುದಾಯ ಪ್ರತಿನಿಧಿಸುತ್ತದೆ. ಒಕ್ಕಲುತನ ಸಂಸ್ಕೃತಿಯನ್ನು ಪ್ರತಿಪಾದಿಸಿಕೊಂಡು ಬಂದಿರುವ ಒಕ್ಕಲಿಗ ಸಮುದಾಯದವರು ಈ ದೇಶದ ಮಣ್ಣಿನ ಮಕ್ಕಳು. ನಮ್ಮ ಸಮುದಾಯಕ್ಕೆ ಸೇರಿದ ದೇಶ ಕಂಡ ಮುತ್ಸದ್ಧಿ ಹಿರಿಯ ರಾಜಕಾರಣಿ, ಮಣ್ಣಿನ ಮಗ ದೇವೇಗೌಡರವರು ದೇಶದ ಪ್ರಧಾನ ಮಂತ್ರಿಯಾಗಿ ಈ ದೇಶದ ಕೀರ್ತಿಯನ್ನು ಹೆಚ್ಚಿಸಿದವರು, ವಿಶ್ವ ಮಾನವ ಸಂದೇಶವನ್ನು ಪ್ರಪಂಚಕ್ಕೆ ಸಾರಿದ ರಾಷ್ಟ್ರಕವಿ ಕುವೆಂಪುರವರು ಇದೇ ಸಮುದಾಯದವರು. ಸಾಮಾಜಿಕ ಸಾಂಸ್ಕೃತಿಕ, ಶೈಕ್ಷಣಿಕ, ರಾಜಕೀಯ, ಹಾಗೂ ಆರ್ಥಿಕವಾಗಿ ಈ ಸಮುದಾಯ ದೇಶಕ್ಕೆ ತನ್ನದೇ ಆದ ಅನೇಕ ಕೊಡುಗೆಗಳನ್ನು ನೀಡಿದೆ ಮತ್ತು ನೀಡುತ್ತಿದೆ. ಭಗವಾನ್ ರವರ ಹೇಳಿಕೆಯು ಅಸಮರ್ಥನೀಯ ಅಸಂವಿಧಾನಿಕವಾಗಿದ್ದು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘವು ಅವರ ಹೇಳಿಕೆಯನ್ನು ಖಂಡಿಸುತ್ತದೆ ಮತ್ತು ಸರ್ಕಾರವು ಅವರ ವಿರುದ್ದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅಗ್ರಹಿಸಿದರು.

             

Related posts

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

Suddi Udaya

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!