25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

ಬೆಳ್ತಂಗಡಿ: ಪ್ರೋ ಕೆ ಎಸ್. ಭಗವಾನ್ ಅವರು ಒಕ್ಕಲಿಗರ ಸಮುದಾಯದವರು ಸಂಸ್ಕೃತಿ ಹೀನ ಪಶುಗಳು ಎಂಬ ಕುಚೋದ್ಯದ ಹೇಳಿಕೆಯನ್ನು ನೀಡಿ ಒಕ್ಕಲಿಗರ ಸಮುದಾಯವನ್ನು ಅವಮಾನಿಸಿರುವುದು ಅತ್ಯಂತ ಖಂಡನೀಯ ಸಂಗತಿ. ಈ ಹೇಳಿಕೆಯು ಅವರ ಮಾನಸಿಕ ಅಸ್ವಸ್ಥತೆಯನ್ನು ಸೂಚಿಸುತ್ತದೆ. ಮತಿಭ್ರಮಣೆಗೊಂಡು ಆಡಿದ ಮಾತುಗಳು ಸಾಮಾಜಿಕ ದುಷ್ಪಾರಿಣಾಮಕ್ಕೆ ಕಾರಣವಾಗುತ್ತದೆ ಎಂಬ ಸಾಮಾನ್ಯ ಜ್ಞಾನ ಶ್ರೀ ಭಗವಾನ್‌ಗೆ ಇಲ್ಲದಿರುವುದು ಅತ್ಯಂತ ಖೇದಕರ ಸಂಗತಿಯಾಗಿದೆ.


ನಮ್ಮ ದೇಶದ ಬೆನ್ನೆಲುಬು ರೈತ. ಸಮಸ್ತ ರೈತ ಸಮುದಾಯವನ್ನು ಒಕ್ಕಲಿಗ ಸಮುದಾಯ ಪ್ರತಿನಿಧಿಸುತ್ತದೆ. ಒಕ್ಕಲುತನ ಸಂಸ್ಕೃತಿಯನ್ನು ಪ್ರತಿಪಾದಿಸಿಕೊಂಡು ಬಂದಿರುವ ಒಕ್ಕಲಿಗ ಸಮುದಾಯದವರು ಈ ದೇಶದ ಮಣ್ಣಿನ ಮಕ್ಕಳು. ನಮ್ಮ ಸಮುದಾಯಕ್ಕೆ ಸೇರಿದ ದೇಶ ಕಂಡ ಮುತ್ಸದ್ಧಿ ಹಿರಿಯ ರಾಜಕಾರಣಿ, ಮಣ್ಣಿನ ಮಗ ದೇವೇಗೌಡರವರು ದೇಶದ ಪ್ರಧಾನ ಮಂತ್ರಿಯಾಗಿ ಈ ದೇಶದ ಕೀರ್ತಿಯನ್ನು ಹೆಚ್ಚಿಸಿದವರು, ವಿಶ್ವ ಮಾನವ ಸಂದೇಶವನ್ನು ಪ್ರಪಂಚಕ್ಕೆ ಸಾರಿದ ರಾಷ್ಟ್ರಕವಿ ಕುವೆಂಪುರವರು ಇದೇ ಸಮುದಾಯದವರು. ಸಾಮಾಜಿಕ ಸಾಂಸ್ಕೃತಿಕ, ಶೈಕ್ಷಣಿಕ, ರಾಜಕೀಯ, ಹಾಗೂ ಆರ್ಥಿಕವಾಗಿ ಈ ಸಮುದಾಯ ದೇಶಕ್ಕೆ ತನ್ನದೇ ಆದ ಅನೇಕ ಕೊಡುಗೆಗಳನ್ನು ನೀಡಿದೆ ಮತ್ತು ನೀಡುತ್ತಿದೆ. ಭಗವಾನ್ ರವರ ಹೇಳಿಕೆಯು ಅಸಮರ್ಥನೀಯ ಅಸಂವಿಧಾನಿಕವಾಗಿದ್ದು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘವು ಅವರ ಹೇಳಿಕೆಯನ್ನು ಖಂಡಿಸುತ್ತದೆ ಮತ್ತು ಸರ್ಕಾರವು ಅವರ ವಿರುದ್ದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅಗ್ರಹಿಸಿದರು.

             

Related posts

ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ರವರಿಗೆ  ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಪರಿಹಾರ

Suddi Udaya

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

Suddi Udaya
error: Content is protected !!