July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಉಜಿರೆ ಶ್ರೀಧ. ಮ. ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಖ್ಯಾತ ಶಿಲ್ಪಿ ಶಶಿಧರ ಆಚಾರ್ಯ ಬೆಳಾಲು ಇವರ ತಂಡದವರಿಂದ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ ಜರಗಿತು.

ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಿದ ಉಜಿರೆಯ ಖ್ಯಾತ ಸ್ವರ್ಣೋದ್ಯಮಿ ಆನಂದ ಆಚಾರ್ಯ ಬೆಳಾಲುರವರು ಮಾತನಾಡಿ, ಇವತ್ತು ಯಾವುದೇ ವೃತ್ತಿಗೆ ಅದರದ್ದೇ ಆದ ಮಹತ್ತ್ವವಿದೆ. ಅದರಲ್ಲೂ ಮರದ ಕೆತ್ತನೆ ಕಾರ್ಯವು ಪ್ರಸ್ತುತ ವೃತ್ತಿಯನ್ನು ಮೀರಿ ಕಲೆಯಾಗಿ ಬೆಳೆದಿದೆ. ಹಳ್ಳಿ ಪ್ರದೇಶವಾದ ಬೆಳಾಲು ಪ್ರೌಢಶಾಲೆಯಲ್ಲಿ ಆಯೋಜಿಸಿದ ಇಂತಹ ವಿಶಿಷ್ಟ ಕಾರ್ಯಕ್ರಮ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.

ಅತಿಥಿಗಳಾಗಿ ಆಗಮಿಸಿದ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿ, ಶಿಲ್ಪಿ ಶಶಿಧರ ಆಚಾರ್ಯ ರವರು ಶುಭಹಾರೈಸಿದರು. ವೇದಿಕೆಯಲ್ಲಿ ಯೋಜನಾಧಿಕಾರಿ ಪ್ರಕಾಶ್ ಗೌಡರವರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಚಿದಂಬರ ತೆಂಕಕಾರಂದೂರು, ಶಶಿಧರ ಆಚಾರ್ಯ ಬೆಳಾಲು, ವಸಂತ ಆಚಾರ್ಯ ಪಾರಳ, ಸತೀಶ ಆಚಾರ್ಯ ಬೆಳಾಲು, ಹರೀಶ ಆಚಾರ್ಯ ಬೆಳಾಲು, ಮಕ್ಕಳಾದ ಪ್ರಣವ್ ಮತ್ತು ಪೃಥ್ವೀರಾಮ್ ರವರು ಶಿಲ್ಪಿಗಳಾಗಿ ಭಾಗವಹಿಸಿದ್ದರು.

ಶಿಕ್ಷಕರ ರಕ್ಷಕ ಸಂಘ, ಹಳೆ ವಿದ್ಯಾರ್ಥಿ ಸಂಘ ಹಾಗೂ ಊರಿನ ಎಲ್ಲ ಸಂಘಸಂಸ್ಥೆಗಳವರ ಸಹಕಾರದಲ್ಲಿ ಶಿಬಿರವು ಜರಗುತ್ತಿದೆ. ಶಿಬಿರಾರ್ಥಿಗಳಾದ ಪ್ರಣೀತ್ ಸ್ವಾಗತಿಸಿ, ಪುನೀತ ವಂದಿಸಿದರು, ಚಿಂತನೆ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಕೃಷಿ ಪ್ರಾಯೋಗಿಕ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಚಂದ್ರಶೇಖರ ಹೆಚ್ ಎಸ್ ರಾಜ್ಯಕ್ಕೆ ಪ್ರಥಮ

Suddi Udaya
error: Content is protected !!