26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಇದರ ಶುಭಾರಂಭವು ಬೆಳ್ತಂಗಡಿ ಚರ್ಚ್ ರೋಡ್ ಬಳಿ ಅ.15 ರಂದು ನಡೆಯಿತು.

ನೂತನವಾಗಿ ಆರಂಭಿಸಿದ ಬೇಕರಿಯನ್ನು ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಉದ್ಘಾಟಿಸಿ ಸಂಸ್ಥೆಯು ದೇವರ ದಯೆಯಿಂದ ಉತ್ತರೋತ್ತರವಾಗಿ ಬೆಳಗಲಿ ಎಂದು ಶುಭಹಾರೈಸಿದರು.

ನೂತನ‌ ಸಂಸ್ಥೆಗೆ ಬೆಳ್ತಂಗಡಿ ಚರ್ಚ್ ನ ಧರ್ಮಗುರುಗಳು ಶುಭಕೋರಿದರು

ಕಾರ್ಯಕ್ರಮದಲ್ಲಿ ಮಾಲಕರ ಮಾತ- ಪಿತರಾದ ಶ್ರೀಮತಿ ಗಿರಿಜಾ- ರಾಮಣ್ಣ ಪೂಜಾರಿ,ಉದ್ಯಮಿ ಚಂದ್ರಶೇಖರ್ ,ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ ,ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಅಶ್ವಥ್ ಕುಮಾರ್,ಉಜಿರೆ ಗ್ರಾ.ಪಂ ಸದಸ್ಯ ಗುರುಪ್ರಸಾದ್,ಪ್ರಮುಖರಾದ ಅಣ್ಣು ಪೂಜಾರಿ ಗಂಪದಕೋಡಿ ಕೊಲ್ಲಿ ಹಾಗೂ ಇತರರು ಉಪಸ್ಥಿತರಿದ್ದು ಶುಭಾಶಯ ತಿಳಿಸಿದರು.

ಸಂಸ್ಥೆಯ ಮಾಲಕರಾದ ಶ್ರೀಮತಿ ರಶ್ಮಿ ಮತ್ತು ನವೀನ್ ಕುಮಾರ್ ಇಂದಬೆಟ್ಟು,ಮಕ್ಕಳಾದ ಸಾಹಿತ್ಯ,ಶ್ರೀಯಾನ್ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

ಸಂಸ್ಥೆಯಲ್ಲಿ ಮದುವೆ, ಸೀಮಂತ, ಹಬ್ಬ ಹರಿದಿನ, ವಿಶೇಷ ಕಾರ್ಯಕ್ರಮ ಹಾಗೂ ಇನ್ನಿತರ ಯಾವುದೇ ಶುಭ ಸಮಾರಂಭಗಳಿಗೆ ಬೇಕಾದ ರೀತಿಯಲ್ಲಿ ಸಿಹಿತಿಂಡಿಗಳನ್ನು ತಯಾರಿಸಿಕೊಡಲಾಗುವುದು ಮತ್ತು ಒದಗಿಸಿಕೊಡಲಾಗುವುದು ಎಂದು ಸಂಸ್ಥೆಯ ಮಾಲಕರು ತಿಳಿಸಿದರು.

Related posts

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಮಾರಿ ಪೂಜೆೋತ್ಸವ

Suddi Udaya
error: Content is protected !!