ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya


ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್ಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ಪ್ರಶಸ್ತಿ ಪತ್ರವನ್ನು ವಿತರಿಸಿದರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಶಿಕ್ಷಕಿ ಶ್ರೀಮತಿ ಪ್ರಮೀಳಾ ಇವರುಗಳಿಗೆ ಮಾರ್ಗದರ್ಶನವನ್ನು ನೀಡಿರುತ್ತಾರೆ.

ಕಬ್ಸ್ ವಿಭಾಗದಲ್ಲಿ ಕಾರ್ತಿಕ್ ಪ್ರಸಾದ್, ಶ್ರೀರಾಮ ಭಟ್, ಮನಿತ್ ಶೆಟ್ಟಿ, ದಿಷನ್, ಬುಲ್ ಬುಲ್ಸ್ ವಿಭಾಗದಲ್ಲಿ ಧಾತ್ರಿ ಶೆಟ್ಟಿ, ಶ್ರಾವಣಿ, ಸಮನ್ವಿ ಭಟ್, ಅಲೀನಾ ಫಾತಿಮಾ, ದ್ರವ್ಯ ಪಿ ಜೈನ್ ಆತ್ಮಿ ಎ ಶೆಟ್ಟಿ, ಅಭಿಜ್ಞಾ ಭಟ್, ಆದ್ಯ ಎಸ್ ಶೆಣೈ, ಯಶ್ವಿ, ಗೈಡ್ಸ್ ವಿಭಾಗದಲ್ಲಿ ಅನುಶ್ರೀ, ಸ್ಕೌಟ್ ವಿಭಾಗದಲ್ಲಿ ರಕ್ಷಣ್ ಶೆಟ್ಟಿ, ಜಯದೀಪ್ ಗೌಡ ಪ್ರಶಸ್ತಿಯನ್ನು ಪಡೆದುಕೊಂಡರು.

Leave a Comment

error: Content is protected !!