25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅ.18 ರಂದು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ನೆರವೇರಿತು.

ಉದ್ಘಾಟಿಸಿ ಮಾತನಾಡಿದ ಶ್ರೀ ಧ.ಮಂ. ಕಲಾ ಕೇಂದ್ರದ ರಂಗ ನಿರ್ದೇಶಕ ಯಶವಂತ್, “ಬದುಕು ಎಂಬುದು ಒಂದು ಕಲೆ. ಇದರಲ್ಲಿ ನಾವು ಪಾತ್ರಧಾರಿಗಳು. ಆದರೆ ವೇದಿಕೆಯಲ್ಲಿ ಪಾತ್ರ ಮಾಡಲು ನಿರಂತರ ಅಭ್ಯಾಸ ಅಗತ್ಯ” ಎಂದರು.


“ನಾವು ಕಲಿಯುವಾಗ ನಿಷ್ಕಲ್ಮಶ ಮನಸ್ಸಿನಿಂದ ಹೇಳಿದ್ದನ್ನು ಕೇಳಬೇಕು ಮಾತ್ರವಲ್ಲ ಗುರುಗಳಿಗೆ ಕಲಿಕೆ ವಿಷಯಕ್ಕೆ ಗುಲಾಮನ ರೀತಿಯಲ್ಲಿ ಇದ್ದಾಗ ಮಾತ್ರ ಎಲ್ಲವನ್ನೂ ತಿಳಿದುಕೊಳ್ಳಲು ಸಾಧ್ಯ” “ಮನುಷ್ಯ ಹುಟ್ಟಿ ಸಾಯುವ ತನಕ ಆತನ ಜೀವನವನ್ನು ದಶಾವತಾರಕ್ಕೆ ಹೋಲಿಸಬಹುದು. ಗುರಿಯನ್ನು ಸಾಧಿಸಲು ದಾರಿಯಲ್ಲಿ ಸಿಗುವ ಅಪಾಯಗಳ ಕುರಿತು ಆಲೋಚಿಸುವ ಬದಲು ಗುರಿಯ ಕಡೆಗೆ ಗಮನ ಇರಲಿ” ಎಂದು ಅವರು ತಿಳಿಸಿದರು.


ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಕಾರುಣ್ಯ ಮತ್ತು ಬಳಗದವರು ಪ್ರಾರ್ಥಿಸಿದರು. ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು

Related posts

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ರವರಿಗೆ ಸ್ಪೂರ್ತಿ ಕುಮಾರ ಸೇವಾ ರತ್ನ ಪ್ರಶಸ್ತಿ

Suddi Udaya

ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya

ಕಿಲ್ಲೂರು ಮುಹಿಯದ್ದೀನ್ ಜುಮಾ ಮಸೀದಿಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya
error: Content is protected !!