38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅ.18 ರಂದು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ನೆರವೇರಿತು.

ಉದ್ಘಾಟಿಸಿ ಮಾತನಾಡಿದ ಶ್ರೀ ಧ.ಮಂ. ಕಲಾ ಕೇಂದ್ರದ ರಂಗ ನಿರ್ದೇಶಕ ಯಶವಂತ್, “ಬದುಕು ಎಂಬುದು ಒಂದು ಕಲೆ. ಇದರಲ್ಲಿ ನಾವು ಪಾತ್ರಧಾರಿಗಳು. ಆದರೆ ವೇದಿಕೆಯಲ್ಲಿ ಪಾತ್ರ ಮಾಡಲು ನಿರಂತರ ಅಭ್ಯಾಸ ಅಗತ್ಯ” ಎಂದರು.


“ನಾವು ಕಲಿಯುವಾಗ ನಿಷ್ಕಲ್ಮಶ ಮನಸ್ಸಿನಿಂದ ಹೇಳಿದ್ದನ್ನು ಕೇಳಬೇಕು ಮಾತ್ರವಲ್ಲ ಗುರುಗಳಿಗೆ ಕಲಿಕೆ ವಿಷಯಕ್ಕೆ ಗುಲಾಮನ ರೀತಿಯಲ್ಲಿ ಇದ್ದಾಗ ಮಾತ್ರ ಎಲ್ಲವನ್ನೂ ತಿಳಿದುಕೊಳ್ಳಲು ಸಾಧ್ಯ” “ಮನುಷ್ಯ ಹುಟ್ಟಿ ಸಾಯುವ ತನಕ ಆತನ ಜೀವನವನ್ನು ದಶಾವತಾರಕ್ಕೆ ಹೋಲಿಸಬಹುದು. ಗುರಿಯನ್ನು ಸಾಧಿಸಲು ದಾರಿಯಲ್ಲಿ ಸಿಗುವ ಅಪಾಯಗಳ ಕುರಿತು ಆಲೋಚಿಸುವ ಬದಲು ಗುರಿಯ ಕಡೆಗೆ ಗಮನ ಇರಲಿ” ಎಂದು ಅವರು ತಿಳಿಸಿದರು.


ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಕಾರುಣ್ಯ ಮತ್ತು ಬಳಗದವರು ಪ್ರಾರ್ಥಿಸಿದರು. ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

Suddi Udaya

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya

ರಾಜ್ಯಮಟ್ಟದ ಎಸ್ ಡಿ ಎಂ ಬಿ.ವೊಕ್ ಉತ್ಸವ : ವಾಣಿ ಪ. ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!