ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಕಬ್ಬಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಪದಾಧಿಕಾರಿಯ ಆಯ್ಕೆ: ಅಧ್ಯಕ್ಷರಾಗಿ ಪ್ರಭಾಕರ್ ನಾರಾವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಅಮೇಚೂರ್ ಕಬ್ಬಡಿ ಅಸೋಸಿಯೇಷನ್ ಅಧ್ಯಕ್ಷ ರಂಜನ್.ಜಿ. ಗೌಡ ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ತೀರ್ಪುಗಾರರ ಮಂಡಳಿ ಸಭೆ ನಡೆಸಿ ಹೊಸದಾಗಿ ತೀರ್ಪುಗಾರ ಪದಾಧಿಕಾರಿಗಳ ಆಯ್ಕೆಯು ಬೆಳ್ತಂಗಡಿ ಸುವರ್ಣ ಆರ್ಕೇಡ್ ನಲ್ಲಿ ಅ.17 ರಂದು ನಡೆಯಿತು.

ತಾಲೂಕು ಅಧ್ಯಕ್ಷರಾದ ಕರ್ನಾಟಕ ರಾಜ್ಯ ತೀರ್ಪುಗಾರ ಮಂಡಳಿಯ ರಾಜ್ಯ ಸಂಚಾಲಕ ಪ್ರಭಾಕರ್ ನಾರಾವಿ ಅವಿರೋಧ ಆಯ್ಕೆಯಾದರು. ಸಂಚಾಲಕರಾಗಿ ಶೀತಲ್ ಪಡಿವಾಳ್ , ಕೋಶಾಧಿಕಾರಿಯಾಗಿ ಧರ್ಮೇಂದ್ರ ಗೌಡರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಪ್ರಭಾಕರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಶೆಟ್ಟಿ, ಕಾರ್ಯಾಧ್ಯಕ್ಷ ಜಿಲ್ಲಾ ಕಬ್ಬಡಿ ಅಸೋಸಿಯೇಷನ್ ಉಪಾಧ್ಯಕ್ಷ ನಾಮದೇವು ಮುಂಡಾಜೆ, ಜಯರಾಜ್ ಜೈನ್, ಜಿಲ್ಲಾಧ್ಯಕ್ಷರಾದ ಕೃಷ್ಣಾನಂದ ರಾವ್ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya
error: Content is protected !!