ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ : ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಅ.17 ರಂದು ನಡೆಸಲಾಯಿತು.

ಶಿಬಿರದ ಮುಂದಾಳತ್ವವನ್ನು ವಿಕಲಚೇತನ ಮೇಲ್ವಿಚಾರಕರು (MRW ) ರವರಾದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಯಿತು.

ಶಿಬಿರವನ್ನು ತಾಲೂಕಿನ ಅನೇಕ ಗ್ರಾಮ ಪಂಚಾಯಿತಿಯ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರು ಸಹಕಾರ ನೀಡುವುದರೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯ ವೈಧ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯ ವನ್ನು ಪಡೆದುಕೊಳ್ಳಲು ಸಹಕಾರ ನೀಡಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ಅನೇಕ ವಿಕಲಚೇತನರಿಗೆ ಸಹಕಾರವಾಯಿತು.

Leave a Comment

error: Content is protected !!