25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅ.18 ರಂದು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ನೆರವೇರಿತು.

ಉದ್ಘಾಟಿಸಿ ಮಾತನಾಡಿದ ಶ್ರೀ ಧ.ಮಂ. ಕಲಾ ಕೇಂದ್ರದ ರಂಗ ನಿರ್ದೇಶಕ ಯಶವಂತ್, “ಬದುಕು ಎಂಬುದು ಒಂದು ಕಲೆ. ಇದರಲ್ಲಿ ನಾವು ಪಾತ್ರಧಾರಿಗಳು. ಆದರೆ ವೇದಿಕೆಯಲ್ಲಿ ಪಾತ್ರ ಮಾಡಲು ನಿರಂತರ ಅಭ್ಯಾಸ ಅಗತ್ಯ” ಎಂದರು.


“ನಾವು ಕಲಿಯುವಾಗ ನಿಷ್ಕಲ್ಮಶ ಮನಸ್ಸಿನಿಂದ ಹೇಳಿದ್ದನ್ನು ಕೇಳಬೇಕು ಮಾತ್ರವಲ್ಲ ಗುರುಗಳಿಗೆ ಕಲಿಕೆ ವಿಷಯಕ್ಕೆ ಗುಲಾಮನ ರೀತಿಯಲ್ಲಿ ಇದ್ದಾಗ ಮಾತ್ರ ಎಲ್ಲವನ್ನೂ ತಿಳಿದುಕೊಳ್ಳಲು ಸಾಧ್ಯ” “ಮನುಷ್ಯ ಹುಟ್ಟಿ ಸಾಯುವ ತನಕ ಆತನ ಜೀವನವನ್ನು ದಶಾವತಾರಕ್ಕೆ ಹೋಲಿಸಬಹುದು. ಗುರಿಯನ್ನು ಸಾಧಿಸಲು ದಾರಿಯಲ್ಲಿ ಸಿಗುವ ಅಪಾಯಗಳ ಕುರಿತು ಆಲೋಚಿಸುವ ಬದಲು ಗುರಿಯ ಕಡೆಗೆ ಗಮನ ಇರಲಿ” ಎಂದು ಅವರು ತಿಳಿಸಿದರು.


ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಕಾರುಣ್ಯ ಮತ್ತು ಬಳಗದವರು ಪ್ರಾರ್ಥಿಸಿದರು. ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು

Related posts

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಾಜೂರು‌ ಉರೂಸ್ ಸಮಾರೋಪ

Suddi Udaya

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya
error: Content is protected !!