22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅ.18 ರಂದು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ನೆರವೇರಿತು.

ಉದ್ಘಾಟಿಸಿ ಮಾತನಾಡಿದ ಶ್ರೀ ಧ.ಮಂ. ಕಲಾ ಕೇಂದ್ರದ ರಂಗ ನಿರ್ದೇಶಕ ಯಶವಂತ್, “ಬದುಕು ಎಂಬುದು ಒಂದು ಕಲೆ. ಇದರಲ್ಲಿ ನಾವು ಪಾತ್ರಧಾರಿಗಳು. ಆದರೆ ವೇದಿಕೆಯಲ್ಲಿ ಪಾತ್ರ ಮಾಡಲು ನಿರಂತರ ಅಭ್ಯಾಸ ಅಗತ್ಯ” ಎಂದರು.


“ನಾವು ಕಲಿಯುವಾಗ ನಿಷ್ಕಲ್ಮಶ ಮನಸ್ಸಿನಿಂದ ಹೇಳಿದ್ದನ್ನು ಕೇಳಬೇಕು ಮಾತ್ರವಲ್ಲ ಗುರುಗಳಿಗೆ ಕಲಿಕೆ ವಿಷಯಕ್ಕೆ ಗುಲಾಮನ ರೀತಿಯಲ್ಲಿ ಇದ್ದಾಗ ಮಾತ್ರ ಎಲ್ಲವನ್ನೂ ತಿಳಿದುಕೊಳ್ಳಲು ಸಾಧ್ಯ” “ಮನುಷ್ಯ ಹುಟ್ಟಿ ಸಾಯುವ ತನಕ ಆತನ ಜೀವನವನ್ನು ದಶಾವತಾರಕ್ಕೆ ಹೋಲಿಸಬಹುದು. ಗುರಿಯನ್ನು ಸಾಧಿಸಲು ದಾರಿಯಲ್ಲಿ ಸಿಗುವ ಅಪಾಯಗಳ ಕುರಿತು ಆಲೋಚಿಸುವ ಬದಲು ಗುರಿಯ ಕಡೆಗೆ ಗಮನ ಇರಲಿ” ಎಂದು ಅವರು ತಿಳಿಸಿದರು.


ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಕಾರುಣ್ಯ ಮತ್ತು ಬಳಗದವರು ಪ್ರಾರ್ಥಿಸಿದರು. ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

Suddi Udaya

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

Suddi Udaya

ಧರ್ಮಸ್ಥಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya
error: Content is protected !!