September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ರಾಜ್ಯಮಟ್ಟದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಕಬ್ಸ್ ವಿದ್ಯಾರ್ಥಿಗಳಾದ ರಿಶನ್ ಶೆಟ್ಟಿ, ಅದ್ವಿತ್ ಎಸ್ ಪೂಜಾರಿ, ಬುಲ್ ಬುಲ್ಸ್ ವಿದ್ಯಾರ್ಥಿಗಳಾದ ದಿಶಾ ಡಿ ಎ, ಉನ್ನತಿ ಎಸ್, ಅಮೀನಾ ನಭಿಸಾ ಶೈಬಾ, ಅಭಿಜ್ಞಾ ಇವರು ಮಾನ್ಯ ರಾಜ್ಯ ಪಾಲರಿಂದ ಗಾಜಿನ ಮನೆ ಬೆಂಗಳೂರು ನಲ್ಲಿ ನಡೆಯುವ ಪ್ರಶಸ್ತಿ ಪತ್ರ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾನ್ಯ ರಾಜಪಾಲರಿಂದ ಪ್ರಶಸ್ತಿ ಪತ್ರವನ್ನು ಪಡೆಯಲಿರುವರು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತ ಎಂ ಆರ್ ರವರ ಸಹಕಾರ ದೊಂದಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಸಂಯೋಜಕ ಶಿಕ್ಷಕಿ ಶ್ರೀಮತಿ ಪ್ರಮೀಳಾ ರವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

Related posts

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ 4ನೇ ವರ್ಷದ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆ ವೇಣೂರು ಪ್ರೌಢ ಶಾಲಾ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆಗೆ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

Suddi Udaya

ಬೆಳ್ತಂಗಡಿ: ಅಜ್ಜಿಯನ್ನುಕೊಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಬಂಧಿತನಾಗಿದ್ದ ಆರೋಪಿ ಅಶೋಕ್ ಅಸೌಖ್ಯದಿಂದ ಸಾವು

Suddi Udaya

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ

Suddi Udaya

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya
error: Content is protected !!