September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ


ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿ ಶ್ರೀ ಮಹಿಷಮರ್ದಿನಿ ದೇವರ ಸನ್ನಿಧಿಯಲ್ಲಿ ರೋಟರಿ ಕ್ಲಬ್ ನಾಗರಬಾವಿ ಬೆಂಗಳೂರು ಇವರಿಂದ ಸಮಾಜಮುಖಿ ಸೇವೆಯಲ್ಲಿ ವಿಶೇಷ ಸಾಧಕ ಪ್ರಶಸ್ತಿ ಪಡೆದ ವಿ. ಹರೀಶ್ ನೆರಿಯರಿಗೆ ಹಾರ ಶಾಲು ಫಲವಸ್ತು ನೀಡಿ ಅಭಿನಂದನಾ ಕಾರ್ಯಕ್ರಮ ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಸ್ಮರಣಿಕೆ ಮತ್ತು ಪ್ರಸಾದ ನೀಡಿ ಅಭಿನಂದಿಸಿದರು. ಮತ್ತು ಮಕ್ಕಳ ಕುಣಿತ ಭಜನಾ ಮಂಡಳಿಯ ಮಕ್ಕಳು ಹೂ ಗುಚ್ಛ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಹರಿ ಭಟ್ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಾಜೇಂದ್ರ ಸಾಲಿಯಾನ್ ಕಾರ್ಯದರ್ಶಿ ಸಂಜೀವ ಹಾಗೂ ಸದಸ್ಯರು, ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಕಿರಣ್ ಕುಮಾರ್, ಅಧ್ಯಕ್ಷರಾದ ಸದಾನಂದ, ಕಾರ್ಯದರ್ಶಿ ದಯಾನಂದ, ಕೋಶಾಧಿಕಾರಿ ಅಶ್ವಥ್ ಸಂಘಟನಾ ಕಾರ್ಯದರ್ಶಿ ರವಿ ಸಾಲಿಯಾನ್ ಹಿರಿಯ ಸದಸ್ಯ ಚಂದಯ್ಯ ನಿಕಟಪೂರ್ವ ಅಧ್ಯಕ್ಷರಾದ ಇಂದೂಧರ, ಕಾರ್ಯದರ್ಶಿ ನಂದನ್‌, ಗೇತನ್‌, ಜಗದೀಶ್‌, ವಿಜಯ್‌, ರಾಜೇಶ್ ಹಾಗೂ ಭಜನಾ ಮಂಡಳಿಯ ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು, ಭಜನಾ ತಂಡದ ಮಕ್ಕಳು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya

ಮಲವಂತಿಗೆ: ದಿಡುಪೆ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!