July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕೊಕ್ಕಡ ಇದರ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಅ .18 ರಂದು ಜರುಗಿತು

ಅಧ್ಯಕ್ಷರಾಗಿ ಕುಸುಮ, ಉಪಾಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ಹೇಮಾವತಿ, ಜೊತೆ ಕಾರ್ಯದರ್ಶಿಯಾಗಿ ವನಿತಾ, ಕೋಶಾಧಿಕಾರಿಯಾಗಿ ನಳಿನಿ, ಒಟ್ಟು 15 ಪದಾಧಿಕಾರಿಗಳು ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ಮಾದರಿ ಸಂಜೀವಿನಿ ಸಂಘ ಮಾತೃಶ್ರೀ ಸಂಜೀವಿನಿ , ಘನ ತ್ಯಾಜ್ಯ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಉತ್ತಮವಾಗಿ ಕೆಲಸ ನಿರ್ವಹಿಸಿದ ಹಿಂದಿನ ಪದಾಧಿಕಾರಿಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರತಿಮಾ , nrlm ಯೋಜನೆಯ ಸದುದ್ದೇಶ ಹಾಗೂ ಕೈಗೊಳ್ಳಬಹುದಾದ ವಿವಿಧ ಚಟುವಟಿಕೆಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು, ತಾಲೂಕು ಮೇಲ್ವಿಚಾರಕರಾದ ವೀಣಾಶ್ರೀ , ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ದೀಪಕ್ ರಾಜ್ , ಎಮ್.ಬಿ.ಕೆ, ಎಲ್.ಸಿಆರ್.ಪಿ, ಕೃಷಿ ಸಖಿ, ಸಂಜೀವಿನಿ ಸಂಘದ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ಭಾಗವಹಿಸಿದ್ದರು.

ಅಂಬಿಕಾ ನಿರೂಪಿಸಿದರು. ಗಾಯತ್ರಿ (ಕೃಷಿ ಸಖಿ )ಸ್ವಾಗತಿಸಿದರು. ಯಶೋಧ (LCRP) ವರದಿ ಮಂಡಿಸಿದರು, ಸಾವಿತ್ರಿ (LCRP ) ಧನ್ಯವಾದವಿತ್ತರು.

Related posts

ಎಕ್ಸೆಲ್ ಕಾಲೇಜಿನ ಜೆಇಇ ಸಾಧಕರಿಗೆ ಗೌರವಾರ್ಪಣೆ, ನಗದು ಬಹುಮಾನ ಹಸ್ತಾಂತರ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

Suddi Udaya

ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದಿಂದ ಗೌರವಾರ್ಪಣೆ

Suddi Udaya

ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ವಿಷು ಹಬ್ಬ ವಿಶೇಷ ಪೂಜೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya
error: Content is protected !!