September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡ ಇದರ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮವನ್ನು ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿರುವ ಶ್ರೀ ರಾಜರಾಜೇಶ್ವರಿ ದೇವಿಯ ಸನ್ನಿಧಿಯಲ್ಲಿ ಅ. 17ರಂದು ನಡೆಸಲಾಯಿತು.

ಕಾರ್ಯಕ್ರಮವನ್ನು ಗುರುವಾಯನಕೆರೆ ಹವ್ಯಕ ಸಭಾದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಗೋವಿಂದ ಶಾಸ್ತ್ರಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗುರುವಾಯನಕೆರೆ ಹವ್ಯಕ ಸಭಾದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಕೇಶವ ಭಟ್ ಅತ್ತಾಜೆ, ಮುರಳೀಧರ ಭಟ್, ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಅಧ್ಯಕ್ಷೆ ಶ್ರೀಮತಿ ಜಯಂತಿ ಏಕನಾಥ ಶೆಟ್ಟಿ ಹಾಗೂ ಬ್ರಾಮರಿ ಕುಣಿತ ಭಜನಾ ಮಂಡಳಿ ಗುರುಗಳು ಸಂದೇಶ್ ಮದ್ದಡ್ಕ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಒಟ್ಟು 65 ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಹೆತ್ತವರು ಹಾಗೂ ಭಕ್ತಾದಿಗಳು ಅತೀ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂಜೆ ದೀಪ ಪ್ರಜ್ವಲನೆ ಮಾಡಿ ಆರಂಭ ಮಾಡಿದ ಕುಣಿತ ಭಜನಾ ಕಾರ್ಯಕ್ರಮ ರಾತ್ರಿ 8-30 ಕ್ಕೆ ಮಂಗಲದೊಂದಿಗೆ ಸಮಾಪನೆಗೊಂಡಿದ್ದು ನಂತರ ಶ್ರೀ ರಾಜರಾಜೇಶ್ವರಿ ದೇವಿಗೆ ಶ್ರೀ ಬ್ರಾಮರಿ ಕುಣಿತ ಭಜನಾ ಮಂಡಳಿ ವತಿಯಿಂದ ರಂಗಪೂಜೆ ಕಾರ್ಯಕ್ರಮ ನೆರವೇರಿತು.

ಇದೇ ಸಂದರ್ಭದಲ್ಲಿ ಶ್ರೀ ಬ್ರಾಮರಿ ಕುಣಿತ ಭಜನಾ ಮಂಡಳಿ ಗುರುಗಳು ಸಂದೇಶ್ ಮದ್ದಡ್ಕ ಮತ್ತು ಅವರ ಪತ್ನಿಗೆ ವಿದ್ಯಾರ್ಥಿಗಳ ಪರವಾಗಿ ಶಾಲು ಹಾಕಿ ಫಲಪುಷ್ಪ ನೀಡಿ ಗೌರವ ಸಮರ್ಪಣೆ ಮಾಡಲಾಯಿತು.

Related posts

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಲಕ್ಕೀ ಸ್ಕೀಂ ಬಂಪರ್ ಡ್ರಾ

Suddi Udaya

ಬೆಳ್ತಂಗಡಿ : ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರಾಗಿ ಗೋಪಾಲ ಅಧಿಕಾರ ಸ್ವೀಕಾರ

Suddi Udaya

ಮುಂಡಾಜೆ: ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಸಮಾರೋಪ 

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya
error: Content is protected !!