25.7 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

ಬೆಳ್ತಂಗಡಿ: ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯಕ್ಕೊಳಗಾದ ಬಡ ಕುಟುಂಬದ ಪರವಾಗಿ ನಿಂತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳ ಮುಖಾಂತರ ಕೇಸು ದಾಖಲಿಸಿದ ಕಾಂಗ್ರೆಸ್ ಸರಕಾರದ ನೀತಿಯನ್ನು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡಿಸಿದ್ದಾರೆ.

ಅರಣ್ಯ ಅಧಿಕಾರಿಗಳ ದೌರ್ಜನ್ಯವನ್ನು ಕಂಡಾಗ ನಾವು ಪ್ರಜಾಪ್ರಭುತ್ವ ರಾಜ್ಯದಲ್ಲಿದ್ದೇವಾ ಅಥವಾ ಗೂಂಡಾ ಪ್ರಕೃತಿಯ ರಾಜ್ಯದಲ್ಲಿದ್ದೇವಾ ಎಂದು ಸಂಶಯ ಬರುತ್ತಿದೆ. ನಮ್ಮ ಕ್ಷೇತ್ರದ ಬಡ ಕುಟುಂಬದ ಪರವಾಗಿ ನಿಂತು ಅರಣ್ಯ ಅಧಿಕಾರಿಗಳ ದೌರ್ಜನ್ಯವನ್ನು ನಿಲ್ಲಿಸಿದ ಶಾಸಕ ಹರೀಶ್ ಪೂಂಜರವರ ನಡೆ ಸರಿಯಾಗಿದೆ. ಜನರ ಮೇಲೆ ಸರಕಾರಿ ಅಧಿಕಾರಿಗಳು ದೌರ್ಜನ್ಯವೆಸಗಿದಾಗ ಶಾಸಕರು ಕೈಕಟ್ಟಿ ಕೂರಬೇಕಾ?, ಸರಕಾರಿ ಅಧಿಕಾರಿಗಳು ಜನರ ಪರವಾಗಿ ಕೆಲಸ ಮಾಡುವುದನ್ನು ಬಿಟ್ಟು ಸರಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿರುವುದು ದುರಾದೃಷ್ಟ. ಶಿವಮೊಗ್ಗದಲ್ಲಿ ಪೋಲಿಸ್ ವರಿಷ್ಠಾಧಿಕಾರಿ ಮೇಲೆ ಕಲ್ಲು ಎಸೆದ ಮತಾಂದರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ಹಿಂದೇಟು ಹಾಕಿದ್ದನ್ನು ಅಧಿಕಾರಿಗಳು ನೆನಪು ಮಾಡಿಕೊಳ್ಳಿ ಸರಕಾರಿ ಅಧಿಕಾರಿಗಳಿಗೆ ಜನರೇ ರಕ್ಷಣೆ ನೀಡುವುದು ಹೊರತು ಸರಕಾರ ರಕ್ಷಣೆ ನೀಡುವುದಿಲ್ಲ. ಆದುದರಿಂದ ಜನರ ಜೊತೆ ನಿಂತ ಶಾಸಕ ಹರೀಶ್ ಪೂಂಜ ರವರ ಮೇಲೆ ದಾಖಲಿಸಿದ ಕರ್ತವ್ಯಕ್ಕೆ ಅಡ್ಡಿ ಮಾಡಿದರೆಂಬ ಸುಳ್ಳು ಪ್ರಕರಣವನ್ನು ಸರಕಾರ ಕೂಡಲೇ ಕೈಬಿಡಬೇಕೆಂದು ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ರೋಹಿನಿ ಸಿ.ಕೆ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

Suddi Udaya

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya
error: Content is protected !!