23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಬೆಳ್ತಂಗಡಿ: ಮಾನವೀಯ ಸಂಬಂಧಗಳ ಮೂಲಕ ಸ್ನೇಹ, ಬಾಂಧವ್ಯ, ರಾಷ್ಟ್ರ ಪ್ರೇಮವನ್ನು ಬೆಳೆಸುವುದೇ ಸಮಾಜ ಸೇವೆಯ ಉದ್ದೇಶವಾಗಿರಬೇಕು ಎಂದು ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರಾದ ಧರಣೇಂದ್ರ ಕೆ.ಜೈನ್ ಹೇಳಿದ್ದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಭಾಷಣ ಮಾಡುತ್ತಾ, ನಾವು ನಮ್ಮನ್ನು ಪ್ರೀತಿಸುತ್ತಾ ಸಕ್ರೀಯವಾಗಿ ತೊಡಗಿಸಿಕೊಂಡು ಸಾಧನೆ ಮಾಡಬೇಕು. ಜೀವನದಲ್ಲಿ ಉತ್ತಮ ಅವಕಾಶಗಳನ್ನು ತಮ್ಮದಾಗಿಸಿಕೊಳ್ಳಬೇಕು. ಹೆತ್ತವರ ಕಣ್ಣಲ್ಲಿ ಆನಂದ ಭಾಷ್ಪ ತರಿಸುವ ವ್ಯಕ್ತಿತ್ವ ನಮ್ಮದಾಗಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಡಿ. ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ, ಜೊತೆ ಕಾರ್ಯದರ್ಶಿಗಳಾದ ಶ್ರೀನಾಥ್ ಕೆ.ಯಂ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್,ಕುವೆಟ್ಟು ಗ್ರಾಮ ಪಂಚಾಯಿತ್ ನ ಉಪಾಧ್ಯಕ್ಷರಾದ ಗಣೇಶ್.ಕೆ, ಓಡಿಲ್ನಾಳ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ನಿರ್ದೇಶಕರಾದ ನಿರಂಜನ್, ನಿವೃತ್ತ ಮುಖ್ಯೋಪಾಧ್ಯಯರಾದ ದತ್ತಾತ್ರೇಯ ಗೊಲ್ಲ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜ ಪ್ರಕಾಶ್ ಶೆಟ್ಟಿ, ಪಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ನಿವೃತ ಶಿಕ್ಷಕರಾದ ಮೋನಪ್ಪ, ಓಡಿಲ್ನಾಳ ಸರಕಾರಿ ಉನ್ನತಿಕರಿಸಿದ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅರುಣ್ ಸುಮಿತ್, ವಾಣಿ ಪದವಿ ಕಾಲೇಜಿನ ಉಪ ಪ್ರಾಂಶುಲರಾದ ವಿಷ್ಣು ಪ್ರಕಾಶ್ ಎಂ ಉಪಸ್ಥಿತರಿದ್ದರು.


ಉಪನ್ಯಾಸಕ ಬೆಳಿಯಪ್ಪ.ಕೆ ಸ್ವಾಗತಿಸಿದರು. ಸಹ ಶಿಬಿರ ಅಧಿಕಾರಿ ಕುಮಾರಿ ಕಾಮಾಕ್ಷಿ ವರದಿ ವಾಚಿಸಿದರು. ಶಿಬಿರಧಿಕಾರಿ ಶಂಕರ್ ರಾವ್. ಬಿ ಧನ್ಯವಾದ ಸಲ್ಲಿಸಿದರು. ಉಪನ್ಯಾಸಕಿ ಶ್ರೀಮತಿ ರಕ್ಷಾ ಕಾರ್ಯಕ್ರಮ ನಿರೂಪಿಸಿದರು. ವಾಚಿಸಿದರು. ಶಿಬಿರಧಿಕಾರಿ ಶಂಕರ್ ರಾವ್. ಬಿ ಧನ್ಯವಾದ ಸಲ್ಲಿಸಿದರು. ಉಪನ್ಯಾಸಕಿ ಶ್ರೀಮತಿ ರಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

Suddi Udaya

ಸುಳ್ಳು ಸುದ್ದಿ ಪ್ರಸಾರ ಹಾಗೂ ಅವ್ಯಾಚ್ಯ ನಿಂದನೆ ದೂರು : ಸುವರ್ಣ ನ್ಯೂಸ್ ಆ್ಯಂಕರ್ ಹಾಗೂ ವರದಿಗಾರ, ಕ್ಯಾಮೆರಾಮ್ಯಾನ್ ವಿರುದ್ಧ ಪ್ರಕರಣ ದಾಖಲು

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಹರೀಶ್ ಕುಮಾರ್ ಭೇಟಿ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya
error: Content is protected !!