25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

ಮುಂಡಾಜೆ: ಮುಂಡಾಜೆ ಅನುದಾನಿತ ಫ್ರೌಡ ಶಾಲೆ ಮುಂಡಾಜೆ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಬೆಂಗಳೂರು ಇಂದಿರಾನಗರ ಸಹಯೋಗದಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭವು ಅ.20ರಂದು ಮುಂಡಾಜೆ ಫ್ರೌಡ ಶಾಲೆಯಲ್ಲಿ ಜರುಗಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ವಹಿಸಲಿದ್ದಾರೆ. ಶಿಲಾನ್ಯಾಸವನ್ನು ರೋಟರಿ ಜಿಲ್ಲಾ ಗವರ್ನರ್ ರೋ. ಹೆಚ್ ಆರ್ ಕೇಶವ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್ , ಉಜಿರೆ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಅಧ್ಯಕ್ಷ ಶ್ರೀಧರ್ ಜಿ ಭಿಡೆ, ರೋಟರಿ ನಿಕಟಪೂರ್ವ ಜಿಲ್ಲಾ ಗವರ್ನರ್ ರೋ| ಪ್ರಕಾಶ್ ಕಾರಂತ, ರೋಟರಿ ಸಹಾಯಕ ಗವರ್ನರ್ ರೋ| ಡಾ| ರಮೇಶ, ರೋಟರಿ ಜಿಲ್ಲೆಯ ವಲಯ ಸೇನಾನಿ ಯಶವಂತ್ ಪಟವರ್ಧನ್, ಬದುಕು ಕಟ್ಟೋಣ ಬನ್ನಿ ಸಂಚಾಲಕ ಮೋಹನ್ ಕುಮಾರ್ ಕೆ, ಮುಂಡಾಜೆ ಗ್ರಾ.ಪಂ. ಅಧ್ಯಕ್ಷ ಗಣೇಶ ಬಂಗೇರ, ಬೆಂಗಳೂರು ರೋಟರಿ ಅಧ್ಯಕ್ಷ ರೋ| ಬಾಲಕೃಷ್ಣ, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಬಾಳೀಗಾ, ಮೂಡಬಿದಿರೆ ರೋಟರಿ ಕ್ಲಬ್ ಅಧ್ಯಕ್ಷ ರೋ| ನಾಗರಾಜ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ಮ,ಉಂಡಾಜೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವೆಂಕಟೇಶ್ವರ ಭಟ್ ಉಪಸ್ಥಿತರಿರುವರು.,

Related posts

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಉಜಿರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!