22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡ ಇದರ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮವನ್ನು ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿರುವ ಶ್ರೀ ರಾಜರಾಜೇಶ್ವರಿ ದೇವಿಯ ಸನ್ನಿಧಿಯಲ್ಲಿ ಅ. 17ರಂದು ನಡೆಸಲಾಯಿತು.

ಕಾರ್ಯಕ್ರಮವನ್ನು ಗುರುವಾಯನಕೆರೆ ಹವ್ಯಕ ಸಭಾದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಗೋವಿಂದ ಶಾಸ್ತ್ರಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗುರುವಾಯನಕೆರೆ ಹವ್ಯಕ ಸಭಾದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಕೇಶವ ಭಟ್ ಅತ್ತಾಜೆ, ಮುರಳೀಧರ ಭಟ್, ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಅಧ್ಯಕ್ಷೆ ಶ್ರೀಮತಿ ಜಯಂತಿ ಏಕನಾಥ ಶೆಟ್ಟಿ ಹಾಗೂ ಬ್ರಾಮರಿ ಕುಣಿತ ಭಜನಾ ಮಂಡಳಿ ಗುರುಗಳು ಸಂದೇಶ್ ಮದ್ದಡ್ಕ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಒಟ್ಟು 65 ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಹೆತ್ತವರು ಹಾಗೂ ಭಕ್ತಾದಿಗಳು ಅತೀ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂಜೆ ದೀಪ ಪ್ರಜ್ವಲನೆ ಮಾಡಿ ಆರಂಭ ಮಾಡಿದ ಕುಣಿತ ಭಜನಾ ಕಾರ್ಯಕ್ರಮ ರಾತ್ರಿ 8-30 ಕ್ಕೆ ಮಂಗಲದೊಂದಿಗೆ ಸಮಾಪನೆಗೊಂಡಿದ್ದು ನಂತರ ಶ್ರೀ ರಾಜರಾಜೇಶ್ವರಿ ದೇವಿಗೆ ಶ್ರೀ ಬ್ರಾಮರಿ ಕುಣಿತ ಭಜನಾ ಮಂಡಳಿ ವತಿಯಿಂದ ರಂಗಪೂಜೆ ಕಾರ್ಯಕ್ರಮ ನೆರವೇರಿತು.

ಇದೇ ಸಂದರ್ಭದಲ್ಲಿ ಶ್ರೀ ಬ್ರಾಮರಿ ಕುಣಿತ ಭಜನಾ ಮಂಡಳಿ ಗುರುಗಳು ಸಂದೇಶ್ ಮದ್ದಡ್ಕ ಮತ್ತು ಅವರ ಪತ್ನಿಗೆ ವಿದ್ಯಾರ್ಥಿಗಳ ಪರವಾಗಿ ಶಾಲು ಹಾಕಿ ಫಲಪುಷ್ಪ ನೀಡಿ ಗೌರವ ಸಮರ್ಪಣೆ ಮಾಡಲಾಯಿತು.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬಜಿರೆ ಪಿಎಂಶ್ರೀ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

Suddi Udaya

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

Suddi Udaya
error: Content is protected !!