24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

ಬೆಳ್ತಂಗಡಿ: ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯಕ್ಕೊಳಗಾದ ಬಡ ಕುಟುಂಬದ ಪರವಾಗಿ ನಿಂತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳ ಮುಖಾಂತರ ಕೇಸು ದಾಖಲಿಸಿದ ಕಾಂಗ್ರೆಸ್ ಸರಕಾರದ ನೀತಿಯನ್ನು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡಿಸಿದ್ದಾರೆ.

ಅರಣ್ಯ ಅಧಿಕಾರಿಗಳ ದೌರ್ಜನ್ಯವನ್ನು ಕಂಡಾಗ ನಾವು ಪ್ರಜಾಪ್ರಭುತ್ವ ರಾಜ್ಯದಲ್ಲಿದ್ದೇವಾ ಅಥವಾ ಗೂಂಡಾ ಪ್ರಕೃತಿಯ ರಾಜ್ಯದಲ್ಲಿದ್ದೇವಾ ಎಂದು ಸಂಶಯ ಬರುತ್ತಿದೆ. ನಮ್ಮ ಕ್ಷೇತ್ರದ ಬಡ ಕುಟುಂಬದ ಪರವಾಗಿ ನಿಂತು ಅರಣ್ಯ ಅಧಿಕಾರಿಗಳ ದೌರ್ಜನ್ಯವನ್ನು ನಿಲ್ಲಿಸಿದ ಶಾಸಕ ಹರೀಶ್ ಪೂಂಜರವರ ನಡೆ ಸರಿಯಾಗಿದೆ. ಜನರ ಮೇಲೆ ಸರಕಾರಿ ಅಧಿಕಾರಿಗಳು ದೌರ್ಜನ್ಯವೆಸಗಿದಾಗ ಶಾಸಕರು ಕೈಕಟ್ಟಿ ಕೂರಬೇಕಾ?, ಸರಕಾರಿ ಅಧಿಕಾರಿಗಳು ಜನರ ಪರವಾಗಿ ಕೆಲಸ ಮಾಡುವುದನ್ನು ಬಿಟ್ಟು ಸರಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿರುವುದು ದುರಾದೃಷ್ಟ. ಶಿವಮೊಗ್ಗದಲ್ಲಿ ಪೋಲಿಸ್ ವರಿಷ್ಠಾಧಿಕಾರಿ ಮೇಲೆ ಕಲ್ಲು ಎಸೆದ ಮತಾಂದರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ಹಿಂದೇಟು ಹಾಕಿದ್ದನ್ನು ಅಧಿಕಾರಿಗಳು ನೆನಪು ಮಾಡಿಕೊಳ್ಳಿ ಸರಕಾರಿ ಅಧಿಕಾರಿಗಳಿಗೆ ಜನರೇ ರಕ್ಷಣೆ ನೀಡುವುದು ಹೊರತು ಸರಕಾರ ರಕ್ಷಣೆ ನೀಡುವುದಿಲ್ಲ. ಆದುದರಿಂದ ಜನರ ಜೊತೆ ನಿಂತ ಶಾಸಕ ಹರೀಶ್ ಪೂಂಜ ರವರ ಮೇಲೆ ದಾಖಲಿಸಿದ ಕರ್ತವ್ಯಕ್ಕೆ ಅಡ್ಡಿ ಮಾಡಿದರೆಂಬ ಸುಳ್ಳು ಪ್ರಕರಣವನ್ನು ಸರಕಾರ ಕೂಡಲೇ ಕೈಬಿಡಬೇಕೆಂದು ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಜು.12: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ದ.ಕ ಹಾಲು ಒಕ್ಕೂಟದ ವತಿಯಿಂದ ಹೆಣ್ಣು ಕರುಗಳ ಪ್ರದರ್ಶನ

Suddi Udaya

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

Suddi Udaya

ವೇಣೂರು ಪಿಎಸ್ಐ ಅಕ್ಷಯ್ ಡಿ ಅವರಿಗೆ ವೇಣೂರು ಸೊಸೈಟಿಯಿಂದ ಗೌರವ

Suddi Udaya

ಬೆಳ್ತಂಗಡಿ: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya
error: Content is protected !!