July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

ಬೆಳ್ತಂಗಡಿ: ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯಕ್ಕೊಳಗಾದ ಬಡ ಕುಟುಂಬದ ಪರವಾಗಿ ನಿಂತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳ ಮುಖಾಂತರ ಕೇಸು ದಾಖಲಿಸಿದ ಕಾಂಗ್ರೆಸ್ ಸರಕಾರದ ನೀತಿಯನ್ನು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡಿಸಿದ್ದಾರೆ.

ಅರಣ್ಯ ಅಧಿಕಾರಿಗಳ ದೌರ್ಜನ್ಯವನ್ನು ಕಂಡಾಗ ನಾವು ಪ್ರಜಾಪ್ರಭುತ್ವ ರಾಜ್ಯದಲ್ಲಿದ್ದೇವಾ ಅಥವಾ ಗೂಂಡಾ ಪ್ರಕೃತಿಯ ರಾಜ್ಯದಲ್ಲಿದ್ದೇವಾ ಎಂದು ಸಂಶಯ ಬರುತ್ತಿದೆ. ನಮ್ಮ ಕ್ಷೇತ್ರದ ಬಡ ಕುಟುಂಬದ ಪರವಾಗಿ ನಿಂತು ಅರಣ್ಯ ಅಧಿಕಾರಿಗಳ ದೌರ್ಜನ್ಯವನ್ನು ನಿಲ್ಲಿಸಿದ ಶಾಸಕ ಹರೀಶ್ ಪೂಂಜರವರ ನಡೆ ಸರಿಯಾಗಿದೆ. ಜನರ ಮೇಲೆ ಸರಕಾರಿ ಅಧಿಕಾರಿಗಳು ದೌರ್ಜನ್ಯವೆಸಗಿದಾಗ ಶಾಸಕರು ಕೈಕಟ್ಟಿ ಕೂರಬೇಕಾ?, ಸರಕಾರಿ ಅಧಿಕಾರಿಗಳು ಜನರ ಪರವಾಗಿ ಕೆಲಸ ಮಾಡುವುದನ್ನು ಬಿಟ್ಟು ಸರಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿರುವುದು ದುರಾದೃಷ್ಟ. ಶಿವಮೊಗ್ಗದಲ್ಲಿ ಪೋಲಿಸ್ ವರಿಷ್ಠಾಧಿಕಾರಿ ಮೇಲೆ ಕಲ್ಲು ಎಸೆದ ಮತಾಂದರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ಹಿಂದೇಟು ಹಾಕಿದ್ದನ್ನು ಅಧಿಕಾರಿಗಳು ನೆನಪು ಮಾಡಿಕೊಳ್ಳಿ ಸರಕಾರಿ ಅಧಿಕಾರಿಗಳಿಗೆ ಜನರೇ ರಕ್ಷಣೆ ನೀಡುವುದು ಹೊರತು ಸರಕಾರ ರಕ್ಷಣೆ ನೀಡುವುದಿಲ್ಲ. ಆದುದರಿಂದ ಜನರ ಜೊತೆ ನಿಂತ ಶಾಸಕ ಹರೀಶ್ ಪೂಂಜ ರವರ ಮೇಲೆ ದಾಖಲಿಸಿದ ಕರ್ತವ್ಯಕ್ಕೆ ಅಡ್ಡಿ ಮಾಡಿದರೆಂಬ ಸುಳ್ಳು ಪ್ರಕರಣವನ್ನು ಸರಕಾರ ಕೂಡಲೇ ಕೈಬಿಡಬೇಕೆಂದು ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya

ಉಜಿರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯಲ್ಲಿ ‘ ನಶಾ ಮುಕ್ತ ಭಾರತ’ ಬೃಹತ್ ಜಾಗೃತಿ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ವೇಣೂರು: ಸಹೋದರರಿಬ್ಬರಿದ್ದ ಬೈಕ್ ಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

Suddi Udaya

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!