28.3 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

ಬೆಳ್ತಂಗಡಿ: ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯಕ್ಕೊಳಗಾದ ಬಡ ಕುಟುಂಬದ ಪರವಾಗಿ ನಿಂತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳ ಮುಖಾಂತರ ಕೇಸು ದಾಖಲಿಸಿದ ಕಾಂಗ್ರೆಸ್ ಸರಕಾರದ ನೀತಿಯನ್ನು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡಿಸಿದ್ದಾರೆ.

ಅರಣ್ಯ ಅಧಿಕಾರಿಗಳ ದೌರ್ಜನ್ಯವನ್ನು ಕಂಡಾಗ ನಾವು ಪ್ರಜಾಪ್ರಭುತ್ವ ರಾಜ್ಯದಲ್ಲಿದ್ದೇವಾ ಅಥವಾ ಗೂಂಡಾ ಪ್ರಕೃತಿಯ ರಾಜ್ಯದಲ್ಲಿದ್ದೇವಾ ಎಂದು ಸಂಶಯ ಬರುತ್ತಿದೆ. ನಮ್ಮ ಕ್ಷೇತ್ರದ ಬಡ ಕುಟುಂಬದ ಪರವಾಗಿ ನಿಂತು ಅರಣ್ಯ ಅಧಿಕಾರಿಗಳ ದೌರ್ಜನ್ಯವನ್ನು ನಿಲ್ಲಿಸಿದ ಶಾಸಕ ಹರೀಶ್ ಪೂಂಜರವರ ನಡೆ ಸರಿಯಾಗಿದೆ. ಜನರ ಮೇಲೆ ಸರಕಾರಿ ಅಧಿಕಾರಿಗಳು ದೌರ್ಜನ್ಯವೆಸಗಿದಾಗ ಶಾಸಕರು ಕೈಕಟ್ಟಿ ಕೂರಬೇಕಾ?, ಸರಕಾರಿ ಅಧಿಕಾರಿಗಳು ಜನರ ಪರವಾಗಿ ಕೆಲಸ ಮಾಡುವುದನ್ನು ಬಿಟ್ಟು ಸರಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿರುವುದು ದುರಾದೃಷ್ಟ. ಶಿವಮೊಗ್ಗದಲ್ಲಿ ಪೋಲಿಸ್ ವರಿಷ್ಠಾಧಿಕಾರಿ ಮೇಲೆ ಕಲ್ಲು ಎಸೆದ ಮತಾಂದರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ಹಿಂದೇಟು ಹಾಕಿದ್ದನ್ನು ಅಧಿಕಾರಿಗಳು ನೆನಪು ಮಾಡಿಕೊಳ್ಳಿ ಸರಕಾರಿ ಅಧಿಕಾರಿಗಳಿಗೆ ಜನರೇ ರಕ್ಷಣೆ ನೀಡುವುದು ಹೊರತು ಸರಕಾರ ರಕ್ಷಣೆ ನೀಡುವುದಿಲ್ಲ. ಆದುದರಿಂದ ಜನರ ಜೊತೆ ನಿಂತ ಶಾಸಕ ಹರೀಶ್ ಪೂಂಜ ರವರ ಮೇಲೆ ದಾಖಲಿಸಿದ ಕರ್ತವ್ಯಕ್ಕೆ ಅಡ್ಡಿ ಮಾಡಿದರೆಂಬ ಸುಳ್ಳು ಪ್ರಕರಣವನ್ನು ಸರಕಾರ ಕೂಡಲೇ ಕೈಬಿಡಬೇಕೆಂದು ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಭಾರತದ ಟಾಪ್ 100 ಜ್ಯುವೆಲ್ಲರಿ ಪಟ್ಟಿಯಲ್ಲಿ ಪುತ್ತೂರಿನ “ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್” ಗೆ ಸ್ಥಾನ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

Suddi Udaya

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ವೇಣೂರು ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

Suddi Udaya
error: Content is protected !!