25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಬೆಳ್ತಂಗಡಿ: ಮಾನವೀಯ ಸಂಬಂಧಗಳ ಮೂಲಕ ಸ್ನೇಹ, ಬಾಂಧವ್ಯ, ರಾಷ್ಟ್ರ ಪ್ರೇಮವನ್ನು ಬೆಳೆಸುವುದೇ ಸಮಾಜ ಸೇವೆಯ ಉದ್ದೇಶವಾಗಿರಬೇಕು ಎಂದು ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರಾದ ಧರಣೇಂದ್ರ ಕೆ.ಜೈನ್ ಹೇಳಿದ್ದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಭಾಷಣ ಮಾಡುತ್ತಾ, ನಾವು ನಮ್ಮನ್ನು ಪ್ರೀತಿಸುತ್ತಾ ಸಕ್ರೀಯವಾಗಿ ತೊಡಗಿಸಿಕೊಂಡು ಸಾಧನೆ ಮಾಡಬೇಕು. ಜೀವನದಲ್ಲಿ ಉತ್ತಮ ಅವಕಾಶಗಳನ್ನು ತಮ್ಮದಾಗಿಸಿಕೊಳ್ಳಬೇಕು. ಹೆತ್ತವರ ಕಣ್ಣಲ್ಲಿ ಆನಂದ ಭಾಷ್ಪ ತರಿಸುವ ವ್ಯಕ್ತಿತ್ವ ನಮ್ಮದಾಗಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಡಿ. ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ, ಜೊತೆ ಕಾರ್ಯದರ್ಶಿಗಳಾದ ಶ್ರೀನಾಥ್ ಕೆ.ಯಂ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್,ಕುವೆಟ್ಟು ಗ್ರಾಮ ಪಂಚಾಯಿತ್ ನ ಉಪಾಧ್ಯಕ್ಷರಾದ ಗಣೇಶ್.ಕೆ, ಓಡಿಲ್ನಾಳ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ನಿರ್ದೇಶಕರಾದ ನಿರಂಜನ್, ನಿವೃತ್ತ ಮುಖ್ಯೋಪಾಧ್ಯಯರಾದ ದತ್ತಾತ್ರೇಯ ಗೊಲ್ಲ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜ ಪ್ರಕಾಶ್ ಶೆಟ್ಟಿ, ಪಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ನಿವೃತ ಶಿಕ್ಷಕರಾದ ಮೋನಪ್ಪ, ಓಡಿಲ್ನಾಳ ಸರಕಾರಿ ಉನ್ನತಿಕರಿಸಿದ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅರುಣ್ ಸುಮಿತ್, ವಾಣಿ ಪದವಿ ಕಾಲೇಜಿನ ಉಪ ಪ್ರಾಂಶುಲರಾದ ವಿಷ್ಣು ಪ್ರಕಾಶ್ ಎಂ ಉಪಸ್ಥಿತರಿದ್ದರು.


ಉಪನ್ಯಾಸಕ ಬೆಳಿಯಪ್ಪ.ಕೆ ಸ್ವಾಗತಿಸಿದರು. ಸಹ ಶಿಬಿರ ಅಧಿಕಾರಿ ಕುಮಾರಿ ಕಾಮಾಕ್ಷಿ ವರದಿ ವಾಚಿಸಿದರು. ಶಿಬಿರಧಿಕಾರಿ ಶಂಕರ್ ರಾವ್. ಬಿ ಧನ್ಯವಾದ ಸಲ್ಲಿಸಿದರು. ಉಪನ್ಯಾಸಕಿ ಶ್ರೀಮತಿ ರಕ್ಷಾ ಕಾರ್ಯಕ್ರಮ ನಿರೂಪಿಸಿದರು. ವಾಚಿಸಿದರು. ಶಿಬಿರಧಿಕಾರಿ ಶಂಕರ್ ರಾವ್. ಬಿ ಧನ್ಯವಾದ ಸಲ್ಲಿಸಿದರು. ಉಪನ್ಯಾಸಕಿ ಶ್ರೀಮತಿ ರಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಇಸ್ರೇಲ್ -ಇರಾನ್ ಯುದ್ಧದ ಹಿನ್ನಲೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ ಬೆಳ್ತಂಗಡಿ ಧರ್ಮಪ್ರಾಂತ್ಯ

Suddi Udaya

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

Suddi Udaya

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

Suddi Udaya
error: Content is protected !!