April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕೊಕ್ಕಡ ಇದರ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಅ .18 ರಂದು ಜರುಗಿತು

ಅಧ್ಯಕ್ಷರಾಗಿ ಕುಸುಮ, ಉಪಾಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ಹೇಮಾವತಿ, ಜೊತೆ ಕಾರ್ಯದರ್ಶಿಯಾಗಿ ವನಿತಾ, ಕೋಶಾಧಿಕಾರಿಯಾಗಿ ನಳಿನಿ, ಒಟ್ಟು 15 ಪದಾಧಿಕಾರಿಗಳು ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ಮಾದರಿ ಸಂಜೀವಿನಿ ಸಂಘ ಮಾತೃಶ್ರೀ ಸಂಜೀವಿನಿ , ಘನ ತ್ಯಾಜ್ಯ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಉತ್ತಮವಾಗಿ ಕೆಲಸ ನಿರ್ವಹಿಸಿದ ಹಿಂದಿನ ಪದಾಧಿಕಾರಿಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರತಿಮಾ , nrlm ಯೋಜನೆಯ ಸದುದ್ದೇಶ ಹಾಗೂ ಕೈಗೊಳ್ಳಬಹುದಾದ ವಿವಿಧ ಚಟುವಟಿಕೆಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು, ತಾಲೂಕು ಮೇಲ್ವಿಚಾರಕರಾದ ವೀಣಾಶ್ರೀ , ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ದೀಪಕ್ ರಾಜ್ , ಎಮ್.ಬಿ.ಕೆ, ಎಲ್.ಸಿಆರ್.ಪಿ, ಕೃಷಿ ಸಖಿ, ಸಂಜೀವಿನಿ ಸಂಘದ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ಭಾಗವಹಿಸಿದ್ದರು.

ಅಂಬಿಕಾ ನಿರೂಪಿಸಿದರು. ಗಾಯತ್ರಿ (ಕೃಷಿ ಸಖಿ )ಸ್ವಾಗತಿಸಿದರು. ಯಶೋಧ (LCRP) ವರದಿ ಮಂಡಿಸಿದರು, ಸಾವಿತ್ರಿ (LCRP ) ಧನ್ಯವಾದವಿತ್ತರು.

Related posts

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya
error: Content is protected !!