September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡ ಇದರ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮವನ್ನು ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿರುವ ಶ್ರೀ ರಾಜರಾಜೇಶ್ವರಿ ದೇವಿಯ ಸನ್ನಿಧಿಯಲ್ಲಿ ಅ. 17ರಂದು ನಡೆಸಲಾಯಿತು.

ಕಾರ್ಯಕ್ರಮವನ್ನು ಗುರುವಾಯನಕೆರೆ ಹವ್ಯಕ ಸಭಾದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಗೋವಿಂದ ಶಾಸ್ತ್ರಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗುರುವಾಯನಕೆರೆ ಹವ್ಯಕ ಸಭಾದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಕೇಶವ ಭಟ್ ಅತ್ತಾಜೆ, ಮುರಳೀಧರ ಭಟ್, ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಅಧ್ಯಕ್ಷೆ ಶ್ರೀಮತಿ ಜಯಂತಿ ಏಕನಾಥ ಶೆಟ್ಟಿ ಹಾಗೂ ಬ್ರಾಮರಿ ಕುಣಿತ ಭಜನಾ ಮಂಡಳಿ ಗುರುಗಳು ಸಂದೇಶ್ ಮದ್ದಡ್ಕ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಒಟ್ಟು 65 ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಹೆತ್ತವರು ಹಾಗೂ ಭಕ್ತಾದಿಗಳು ಅತೀ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂಜೆ ದೀಪ ಪ್ರಜ್ವಲನೆ ಮಾಡಿ ಆರಂಭ ಮಾಡಿದ ಕುಣಿತ ಭಜನಾ ಕಾರ್ಯಕ್ರಮ ರಾತ್ರಿ 8-30 ಕ್ಕೆ ಮಂಗಲದೊಂದಿಗೆ ಸಮಾಪನೆಗೊಂಡಿದ್ದು ನಂತರ ಶ್ರೀ ರಾಜರಾಜೇಶ್ವರಿ ದೇವಿಗೆ ಶ್ರೀ ಬ್ರಾಮರಿ ಕುಣಿತ ಭಜನಾ ಮಂಡಳಿ ವತಿಯಿಂದ ರಂಗಪೂಜೆ ಕಾರ್ಯಕ್ರಮ ನೆರವೇರಿತು.

ಇದೇ ಸಂದರ್ಭದಲ್ಲಿ ಶ್ರೀ ಬ್ರಾಮರಿ ಕುಣಿತ ಭಜನಾ ಮಂಡಳಿ ಗುರುಗಳು ಸಂದೇಶ್ ಮದ್ದಡ್ಕ ಮತ್ತು ಅವರ ಪತ್ನಿಗೆ ವಿದ್ಯಾರ್ಥಿಗಳ ಪರವಾಗಿ ಶಾಲು ಹಾಕಿ ಫಲಪುಷ್ಪ ನೀಡಿ ಗೌರವ ಸಮರ್ಪಣೆ ಮಾಡಲಾಯಿತು.

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

ಲಾಯಿಲ-ನಡ- ನಾವೂರು-ಇಂದಬೆಟ್ಟು ರಸ್ತೆ ಜಲಾವೃತ :ವಾಹನ ಸವಾರರ ಪರದಾಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya

ಆ. 9: ಅಳದಂಗಡಿ ಪ್ರಾ.ಕೃ.ಪ. ಸಹಕಾರ ಸಂಘದ ಸುವರ್ಣ ಮಹೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!