23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

ಬೆಳ್ತಂಗಡಿ: ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯಕ್ಕೊಳಗಾದ ಬಡ ಕುಟುಂಬದ ಪರವಾಗಿ ನಿಂತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳ ಮುಖಾಂತರ ಕೇಸು ದಾಖಲಿಸಿದ ಕಾಂಗ್ರೆಸ್ ಸರಕಾರದ ನೀತಿಯನ್ನು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡಿಸಿದ್ದಾರೆ.

ಅರಣ್ಯ ಅಧಿಕಾರಿಗಳ ದೌರ್ಜನ್ಯವನ್ನು ಕಂಡಾಗ ನಾವು ಪ್ರಜಾಪ್ರಭುತ್ವ ರಾಜ್ಯದಲ್ಲಿದ್ದೇವಾ ಅಥವಾ ಗೂಂಡಾ ಪ್ರಕೃತಿಯ ರಾಜ್ಯದಲ್ಲಿದ್ದೇವಾ ಎಂದು ಸಂಶಯ ಬರುತ್ತಿದೆ. ನಮ್ಮ ಕ್ಷೇತ್ರದ ಬಡ ಕುಟುಂಬದ ಪರವಾಗಿ ನಿಂತು ಅರಣ್ಯ ಅಧಿಕಾರಿಗಳ ದೌರ್ಜನ್ಯವನ್ನು ನಿಲ್ಲಿಸಿದ ಶಾಸಕ ಹರೀಶ್ ಪೂಂಜರವರ ನಡೆ ಸರಿಯಾಗಿದೆ. ಜನರ ಮೇಲೆ ಸರಕಾರಿ ಅಧಿಕಾರಿಗಳು ದೌರ್ಜನ್ಯವೆಸಗಿದಾಗ ಶಾಸಕರು ಕೈಕಟ್ಟಿ ಕೂರಬೇಕಾ?, ಸರಕಾರಿ ಅಧಿಕಾರಿಗಳು ಜನರ ಪರವಾಗಿ ಕೆಲಸ ಮಾಡುವುದನ್ನು ಬಿಟ್ಟು ಸರಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿರುವುದು ದುರಾದೃಷ್ಟ. ಶಿವಮೊಗ್ಗದಲ್ಲಿ ಪೋಲಿಸ್ ವರಿಷ್ಠಾಧಿಕಾರಿ ಮೇಲೆ ಕಲ್ಲು ಎಸೆದ ಮತಾಂದರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ಹಿಂದೇಟು ಹಾಕಿದ್ದನ್ನು ಅಧಿಕಾರಿಗಳು ನೆನಪು ಮಾಡಿಕೊಳ್ಳಿ ಸರಕಾರಿ ಅಧಿಕಾರಿಗಳಿಗೆ ಜನರೇ ರಕ್ಷಣೆ ನೀಡುವುದು ಹೊರತು ಸರಕಾರ ರಕ್ಷಣೆ ನೀಡುವುದಿಲ್ಲ. ಆದುದರಿಂದ ಜನರ ಜೊತೆ ನಿಂತ ಶಾಸಕ ಹರೀಶ್ ಪೂಂಜ ರವರ ಮೇಲೆ ದಾಖಲಿಸಿದ ಕರ್ತವ್ಯಕ್ಕೆ ಅಡ್ಡಿ ಮಾಡಿದರೆಂಬ ಸುಳ್ಳು ಪ್ರಕರಣವನ್ನು ಸರಕಾರ ಕೂಡಲೇ ಕೈಬಿಡಬೇಕೆಂದು ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಗುಂಡು ಎಸೆತ ಸ್ಪರ್ಧೆ : ಲಾಯಿಲ ದೀಪಾಲ್ ಕೆ.ಆರ್., ಪ್ರಥಮ ಸ್ಥಾನ

Suddi Udaya

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಮಾ.30-ಎ.5: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಬೇಕು : ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!