September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

ಬೆಳ್ತಂಗಡಿ : ಬೆಳ್ತಂಗಡಿ ಇಳಂತಿಲ ಗ್ರಾಮ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ನಾಗರೀಕರು ಅನುಭವಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡಿ ಕೊಡುವಂತೆ ಇಳಂತಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಅ.20 ರಂದು ಮನವಿ ನೀಡಲಾಯಿತು.


ಇಳಂತಿಲ ಗ್ರಾಮದ ವಾರ್ಡ್‌ ಸಂಖ್ಯೆ ನಾಲ್ಕು ಕಡವಿನ ಬಾಗಿಲು ಹಾಗೂ ವಿನಾಯಿ ನಗರದ ನಾಗರೀಕರು ಹಲವಾರು ವರ್ಷಗಳಿಂದ ನೇತ್ರಾವತಿ ನದಿಯ ನೀರು ಯಾವುದೇ ಶುದ್ದೀಕರಣ ಘಟಕವಿಲ್ಲದೆ ಇನ್ನೂರಕ್ಕೂ ಅಧಿಕ ಮನೆಗಳಿಗೆ ಕಲುಷಿತ ನೀರು ನೇರ ಪೋರೈಕೆಯಾಗುತಿದ್ದು ಅಂಗನವಾಡಿ ಕೇಂದ್ರ ಸಣ್ಣ ಮಕ್ಕಳು ಹಾಗೂ ವಯಸ್ಕರು ಗರ್ಭಿಣಿ ಮಹಿಳೆಯರಿಗೆ ಆರೋಗ್ಯದಲ್ಲಿ ಅತಿಯಾದ ಸಮಸ್ಯೆ ಕಾಣುತಿದ್ದು ಅಪಾಯಕಾರಿ ನೀರನ್ನೇ ಉಪಯೋಗ ಮಾಡುತಿದ್ದಾರೆ ಇದರ ಬಗ್ಗೆ ವಾರ್ಡ್ ಸಭೆ, ಗ್ರಾಮ ಸಭೆ ಮತ್ತು ಪಂಚಾಯತ್ ಅಧಿಕಾರಿಗಳ ಗಮನಕ್ಕೆ ತಂದರು.

ಅಧಿಕಾರಿಗಳು ಯಾವುದೆ ರೀತಿ ಕ್ರಮ ಕೈಗೊಳ್ಳದ ನಿರ್ಲಕ್ಷ ತೋರಿಸುತ್ತಿದ್ದು ಒಂದು ವಾರದೊಳಗಾಗಿ ನೀರಿನ ದೊಡ್ಡ ಮಟ್ಟದ ಸಮಸ್ಯೆಯನ್ನು ಬಗೆಹರಿಸುವ ಮೂಲಕ ಶೀಘ್ರ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿ ಗ್ರಾಮಸ್ಥರಿಗೆ ಪರಿಹಾರ ದೊರಕಿಸಬೇಕಾಗಿ ಮನವಿ ಮಾಡಲಾಯಿತು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ನಿಸಾರ್ ಕುದ್ರಡ್ಕ, ಕಡವಿನ ಬಾಗಿಲು ಬೂತ್ ಸಮಿತಿ ಅಧ್ಯಕ್ಷರಾದ ಅಝೀಝ್, ಕಾರ್ಯದರ್ಶಿ ಅನ್ವರ್, ಕಣಿಯೂರು ಬ್ಲಾಕ್ ಸಮಿತಿ ಉಪಾಧ್ಯಕ್ಷರಾದ ರಝಕ್ ಕುದ್ರಡ್ಕ , ಸದಸ್ಯರಾದ ಫರ್ಹಾನ್, ಸ್ವಾಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಬುದ್ಧ ಬಸವ ಅಂಬೇಡ್ಕರ್ ವಚನ ಟ್ರಸ್ಟ್ ವತಿಯಿಂದ ಕೋರೆಗಾಂವ್ ವಿಜಯೋತ್ಸವ

Suddi Udaya

ಪ್ರತಿಷ್ಠಿತ ಮುಗ್ಗಗುತ್ತಿನಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ: ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya

ಪಬ್ಲಿಕ್ ಪರೀಕ್ಷೆ : ಉಣ್ಣಾಲು , ಕೊಯ್ಯೂರು ಸಿರಾಜುಲ್ ಹುದಾ ಅರೇಬಿಕ್ ಸ್ಕೂಲ್ ವಿದ್ಯಾರ್ಥಿ ನೂರುನ್ನಿಸಾ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ್‍ಯಾಂಕ್: ಉಣ್ಣಾಲು ಕೊಯ್ಯೂರು ಮದರಸಕ್ಕೆ ಶೇಕಡಾ 100 ಫಲಿತಾಂಶ

Suddi Udaya
error: Content is protected !!