July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

ಬೆಳ್ತಂಗಡಿ : ಬೆಳ್ತಂಗಡಿ ಇಳಂತಿಲ ಗ್ರಾಮ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ನಾಗರೀಕರು ಅನುಭವಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡಿ ಕೊಡುವಂತೆ ಇಳಂತಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಅ.20 ರಂದು ಮನವಿ ನೀಡಲಾಯಿತು.


ಇಳಂತಿಲ ಗ್ರಾಮದ ವಾರ್ಡ್‌ ಸಂಖ್ಯೆ ನಾಲ್ಕು ಕಡವಿನ ಬಾಗಿಲು ಹಾಗೂ ವಿನಾಯಿ ನಗರದ ನಾಗರೀಕರು ಹಲವಾರು ವರ್ಷಗಳಿಂದ ನೇತ್ರಾವತಿ ನದಿಯ ನೀರು ಯಾವುದೇ ಶುದ್ದೀಕರಣ ಘಟಕವಿಲ್ಲದೆ ಇನ್ನೂರಕ್ಕೂ ಅಧಿಕ ಮನೆಗಳಿಗೆ ಕಲುಷಿತ ನೀರು ನೇರ ಪೋರೈಕೆಯಾಗುತಿದ್ದು ಅಂಗನವಾಡಿ ಕೇಂದ್ರ ಸಣ್ಣ ಮಕ್ಕಳು ಹಾಗೂ ವಯಸ್ಕರು ಗರ್ಭಿಣಿ ಮಹಿಳೆಯರಿಗೆ ಆರೋಗ್ಯದಲ್ಲಿ ಅತಿಯಾದ ಸಮಸ್ಯೆ ಕಾಣುತಿದ್ದು ಅಪಾಯಕಾರಿ ನೀರನ್ನೇ ಉಪಯೋಗ ಮಾಡುತಿದ್ದಾರೆ ಇದರ ಬಗ್ಗೆ ವಾರ್ಡ್ ಸಭೆ, ಗ್ರಾಮ ಸಭೆ ಮತ್ತು ಪಂಚಾಯತ್ ಅಧಿಕಾರಿಗಳ ಗಮನಕ್ಕೆ ತಂದರು.

ಅಧಿಕಾರಿಗಳು ಯಾವುದೆ ರೀತಿ ಕ್ರಮ ಕೈಗೊಳ್ಳದ ನಿರ್ಲಕ್ಷ ತೋರಿಸುತ್ತಿದ್ದು ಒಂದು ವಾರದೊಳಗಾಗಿ ನೀರಿನ ದೊಡ್ಡ ಮಟ್ಟದ ಸಮಸ್ಯೆಯನ್ನು ಬಗೆಹರಿಸುವ ಮೂಲಕ ಶೀಘ್ರ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿ ಗ್ರಾಮಸ್ಥರಿಗೆ ಪರಿಹಾರ ದೊರಕಿಸಬೇಕಾಗಿ ಮನವಿ ಮಾಡಲಾಯಿತು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ನಿಸಾರ್ ಕುದ್ರಡ್ಕ, ಕಡವಿನ ಬಾಗಿಲು ಬೂತ್ ಸಮಿತಿ ಅಧ್ಯಕ್ಷರಾದ ಅಝೀಝ್, ಕಾರ್ಯದರ್ಶಿ ಅನ್ವರ್, ಕಣಿಯೂರು ಬ್ಲಾಕ್ ಸಮಿತಿ ಉಪಾಧ್ಯಕ್ಷರಾದ ರಝಕ್ ಕುದ್ರಡ್ಕ , ಸದಸ್ಯರಾದ ಫರ್ಹಾನ್, ಸ್ವಾಲಿ ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ಎಸ್‌ಡಿಎಂ ಬಿ.ಎಡ್. ಹಾಗೂ ಡಿ.ಎಡ್. ಕಾಲೇಜು ಹಿರಿಯ ವಿದ್ಯಾರ್ಥಿಗಳ ಪುನರ್ ಸಮ್ಮಿಲನ ಕಾರ್ಯಕ್ರಮ

Suddi Udaya

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ

Suddi Udaya
error: Content is protected !!