25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

ಬೆಳ್ತಂಗಡಿ : ಬೆಳ್ತಂಗಡಿ ಇಳಂತಿಲ ಗ್ರಾಮ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ನಾಗರೀಕರು ಅನುಭವಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡಿ ಕೊಡುವಂತೆ ಇಳಂತಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಅ.20 ರಂದು ಮನವಿ ನೀಡಲಾಯಿತು.


ಇಳಂತಿಲ ಗ್ರಾಮದ ವಾರ್ಡ್‌ ಸಂಖ್ಯೆ ನಾಲ್ಕು ಕಡವಿನ ಬಾಗಿಲು ಹಾಗೂ ವಿನಾಯಿ ನಗರದ ನಾಗರೀಕರು ಹಲವಾರು ವರ್ಷಗಳಿಂದ ನೇತ್ರಾವತಿ ನದಿಯ ನೀರು ಯಾವುದೇ ಶುದ್ದೀಕರಣ ಘಟಕವಿಲ್ಲದೆ ಇನ್ನೂರಕ್ಕೂ ಅಧಿಕ ಮನೆಗಳಿಗೆ ಕಲುಷಿತ ನೀರು ನೇರ ಪೋರೈಕೆಯಾಗುತಿದ್ದು ಅಂಗನವಾಡಿ ಕೇಂದ್ರ ಸಣ್ಣ ಮಕ್ಕಳು ಹಾಗೂ ವಯಸ್ಕರು ಗರ್ಭಿಣಿ ಮಹಿಳೆಯರಿಗೆ ಆರೋಗ್ಯದಲ್ಲಿ ಅತಿಯಾದ ಸಮಸ್ಯೆ ಕಾಣುತಿದ್ದು ಅಪಾಯಕಾರಿ ನೀರನ್ನೇ ಉಪಯೋಗ ಮಾಡುತಿದ್ದಾರೆ ಇದರ ಬಗ್ಗೆ ವಾರ್ಡ್ ಸಭೆ, ಗ್ರಾಮ ಸಭೆ ಮತ್ತು ಪಂಚಾಯತ್ ಅಧಿಕಾರಿಗಳ ಗಮನಕ್ಕೆ ತಂದರು.

ಅಧಿಕಾರಿಗಳು ಯಾವುದೆ ರೀತಿ ಕ್ರಮ ಕೈಗೊಳ್ಳದ ನಿರ್ಲಕ್ಷ ತೋರಿಸುತ್ತಿದ್ದು ಒಂದು ವಾರದೊಳಗಾಗಿ ನೀರಿನ ದೊಡ್ಡ ಮಟ್ಟದ ಸಮಸ್ಯೆಯನ್ನು ಬಗೆಹರಿಸುವ ಮೂಲಕ ಶೀಘ್ರ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿ ಗ್ರಾಮಸ್ಥರಿಗೆ ಪರಿಹಾರ ದೊರಕಿಸಬೇಕಾಗಿ ಮನವಿ ಮಾಡಲಾಯಿತು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ನಿಸಾರ್ ಕುದ್ರಡ್ಕ, ಕಡವಿನ ಬಾಗಿಲು ಬೂತ್ ಸಮಿತಿ ಅಧ್ಯಕ್ಷರಾದ ಅಝೀಝ್, ಕಾರ್ಯದರ್ಶಿ ಅನ್ವರ್, ಕಣಿಯೂರು ಬ್ಲಾಕ್ ಸಮಿತಿ ಉಪಾಧ್ಯಕ್ಷರಾದ ರಝಕ್ ಕುದ್ರಡ್ಕ , ಸದಸ್ಯರಾದ ಫರ್ಹಾನ್, ಸ್ವಾಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಮೇಲಂತಬೆಟ್ಟು ಕಬ್ಬಿನಹಿತ್ತಿಲು ನಿವಾಸಿ ಪಿ. ವೆಂಕಟರಮಣ ಭಟ್ ನಿಧನ

Suddi Udaya

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya
error: Content is protected !!