22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

ಬೆಳ್ತಂಗಡಿ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ (ತಾಳೆ ಎಣ್ಣೆ) ಯೋಜನೆಯಡಿ 2023 -24ನೇ ಸಾಲಿನಲ್ಲಿ ತಾಳೆ ಬೆಳೆ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳುವ ರೈತರಿಗೆ ಪ್ರೋತ್ಸಾಹಧನ ಲಭ್ಯವಿದೆ. ಆಸಕ್ತ ರೈತರು ತಮ್ಮ ಜಮೀನಿನ ಪಹಣಿ (RTC) ಮತ್ತು ಆಧಾರ್ ಪ್ರತಿ ಹಾಗೂ ಅರ್ಜಿಯೊಂದಿಗೆ ನ.30 ರೊಳಗೆ ತೋಟಗಾರಿಕೆ ಇಲಾಖೆ (ಜಿ ಪಂ) ಬೆಳ್ತಂಗಡಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದು.

ತಾಳೆಬೆಳೆ ಬೆಳೆಯಲು ತೋಟಗಾರಿಕೆ ಇಲಾಖೆಯಿಂದ ಅನುಮೋದಿತ ಕಂಪನಿಗಳಿಂದ ಗಿಡಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ, ಗಿಡಗಳ ನಿರ್ವಹಣೆಗೆ ಮೂರು ವರ್ಷಗಳ ನಿರ್ವಹಣ ವೆಚ್ಛ ಫಸಲನ್ನು ಖರೀದಿಸಲು ಕಂಪನಿಯವರಿಂದ ಅನುಕೂಲವೂ ಇದೆ. ತಾಳೆ ಬೆಳೆ ಬೆಂಬಲ ಬೆಲೆಯೂ ದೊರೆಯಲಿದೆ. ಹನಿ ನೀರಾವರಿ ಯಾಂತ್ರಿಕರಣ ಸಹಾಯಧನ ಸೌಲಭ್ಯವಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಬೆಳ್ತಂಗಡಿ ಹೋಬಳಿ ಮಹಾವೀರ ಶೇಬಣ್ಣವರ 8123921087, ವೇಣೂರು ಹೋಬಳಿ ಭೀಮರಾಯ ಸೊಡ್ಡಗಿ ಮೊಬೈಲ್ ನಂ: 9741713598, ಕೊಕ್ಕಡ ಹೋಬಳಿ ಮಲ್ಲಿನಾಥ ಬಿರಾದಾರ, ಮೊಬೈಲ್ ನಂ: 9986411477, ಸಹಾಯಕ ತೋಟಗಾರಿಕೆ ನಿರ್ದೇಶಕರು ಕೆ.ಎಸ್‌. ಚಂದ್ರಶೇಖರ್, ಮೊಬೈಲ್ ನಂ: 9448336863 ಸಂಪರ್ಕಿಸಬಹುದು.

Related posts

ಮೊಬೈಲ್ ಸಂಭಾಷಣೆಯನ್ನು ಅನಧಿಕೃತವಾಗಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಬಗ್ಗೆ ದೂರು

Suddi Udaya

ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಪ್ರದೀಶ್ ಮರೋಡಿ ಆಯ್ಕೆ

Suddi Udaya

ಬೆಳ್ತಂಗಡಿ: ರೆಂಕೆದಗುತ್ತುನಲ್ಲಿ ಆವರಣ ಗೋಡೆ ಬಿದ್ದು ಹಾನಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ದೀಪ್ತಿ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya
error: Content is protected !!