34.3 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

ನಾವೂರು: ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಅ.20ರಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಅಶ್ವಿನ್ ಭಟ್ ರವರ ಪೌರೋಹಿತ್ಯದಲ್ಲಿ ನಡೆಯಿತು.

ಬೆಳಿಗ್ಗೆ ನಾವೂರು ಸಿ.ಎ ಬ್ಯಾಂಕ್ ಬಳಿಯಿಂದ ಭವ್ಯವಾದ ಶಾರದಾ ಮೂರ್ತಿಯ ಮೆರವಣಿಗೆ ,ಗಣಹೋಮ, ಶಾರದಾ ಮೂರ್ತಿ ಪ್ರತಿಷ್ಠೆ, ಭಜನಾ ಕಾರ್ಯಕ್ರಮ , ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.

ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷ ಹರೀಶ್ ಕಾರಿಂಜ ಅಧ್ಯಕ್ಷತೆ ವಹಿಸಿದರು. ಕಾರ್ಕಳ ಅಕ್ಷಯ ಗೋಖಲೆ ಧಾರ್ಮಿಕ ಉಪನ್ಯಾಸ ನೀಡಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಧ್ಯಕ್ಷ ಹರೀಶ್ ಸಾಲ್ಯಾನ್ ಮೋರ್ತಾಜೆ, ನಾವೂರು ಆರೋಗ್ಯ ಕ್ಲಿನಿಕ್ ಡಾ| ಪ್ರದೀಪ್ ಎ , ನಾವೂರು ಗ್ರಾ.ಪಂ. ಅಧ್ಯಕ್ಷ ಶ್ರೀಮತಿ ಸುನಂದ ಭಾಗವಹಿಸಿದರು.

ಸುಮಾರು 25 ವರ್ಷಗಳ ಕಾಲ ದುಡಿದ ಅಧ್ಯಕ್ಷರುಗಳನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಪ್ರಮೋದ್ ಸಾಲ್ಯಾನ್ , ಕೋಶಾಧಿಕಾರಿ ಲಕ್ಷ್ಮೀಶ ಕೆ, ಜೊತೆಕಾರ್ಯದರ್ಶಿ ವಿನ್ಯಾಶ್ ಇಡ್ಯಾಲ, ಕಾರ್ಯದರ್ಶಿ ಬಾಲಕೃಷ್ಣ , ಸದಸ್ಯರು , ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದರು.

ಶಾಲಾ ಮಕ್ಕಳು ಪ್ರಾರ್ಥಿಸಿದರು. ಅಧ್ಯಕ್ಷ ಹರೀಶ್ ಕಾರಿಂಜ ಸ್ವಾಗತಿಸಿದರು. ಗಣೇಶ್ ಗೌಡ ನೆಲ್ಲಿಪಲ್ಕೆ ಧನ್ಯವಾದವಿತ್ತರು. ಸುರೇಶ್ ಗೋಳಿದಡಿ ಕಾರ್ಯಕ್ರಮ ನಿರೂಪಿಸಿದರು.

ಸಂಜೆ ಕಾರ್ನಿಕದ ಗತ ವೈಭವ (ಮಾಯೋಡ್ ಮೆರೆಯಿನ ಸತ್ಯೊಲ್ನ ಕತೆ) ನಾಟಕ ನಡೆಯಲಿದೆ. ಹಾಗೂ ಊರ ಪರವೂರ ವಿವಿಧ ಭಜನಾ ಮಂಡಳಿಗಳಿಂದ ಭಜನೆ , ವಿವಿಧ ವೇಷ ಭೂಷಣಗಳು, ಹುಲಿ ಕುಣಿತ, ವಿದ್ಯುದ್ದೀಪಲಂಕೃತವಾದ ಸ್ಥಬ್ಧ ಚಿತ್ರ ವಾಹನಗಳೊಂದಿಗೆ ಶಾರದಾ ಮೂರ್ತಿಯ ವೈಭವದ ಶೋಭಾಯಾತ್ರೆ ಕೈಕಂಬ ಹೊಳೆಯಲ್ಲಿ ವಿಗ್ರಹ ಜಲಸ್ತಂಭನ ನಡೆಯಲಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya
error: Content is protected !!