38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸರಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಮಾಡಿದ್ದು ಇದರ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಹಾಗೂ ಮಂಗಳೂರು ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆಯಲ್ಲಿ ತೀರ್ಮಾನಿಸಿದಂತೆ ಅನೇಕ ಬಾರಿ ಪ್ಲಾಸ್ಟಿಕ್ ಏಜೆಂಟರಿಗೆ ಅಂಗಡಿಗಳಿಗೆ ವಿತರಣೆ ಮಾಡಬಾರದಂತೆ ಸೂಚಿಸಿದರು ಕೂಡ ಬಹಿರಂಗವಾಗಿ ಪ್ಲಾಸ್ಟಿಕ್ ವಿತರಿಸುವುದನ್ನು ತಿಳಿದುಕೊಂಡು ಸಾರ್ವಜನಿಕರ ಮಾಹಿತಿಯ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಪ್ಲಾಸ್ಟಿಕ್ ಮಾರಾಟ ಏಜೆಂಟ್ ರೊಬ್ಬರಿಗೆ ರೂ. 1500.00 ದಂಡನೆಯನ್ನು ವಿಧಿಸಿದ್ದಾರೆ. ಮತ್ತೆ ಪುನಹ ಮಾರಾಟ ಮಾಡದಂತೆ ಎಚ್ಚರಿಕೆಯನ್ನು ನೀಡಲಾಗಿದೆ.

ಏಕ ಬಳಕೆಯ ಪ್ಲಾಸ್ಟಿಕ್ ಬದಲಾಗಿ ಕಾಗದದ ಚೀಲಗಳು/ ಲಕೋಟೆಗಳು ಬಟ್ಟೆ ಚೀಲಗಳನ್ನು ವ್ಯಾಪಾರಸ್ಥರಿಗೆ ನೀಡಲು ತಿಳಿಸಲಾಗಿದೆ. ಇದರಿಂದ ಇತರರಿಗೆ ಎಚ್ಚರಿಕೆ ನೀಡಿದಂತಾಗಿದೆ.

Related posts

ನೇಹಾ ಹತ್ಯೆ ಖಂಡಿಸಿ ಪ್ರತಿಭಟಿಸಿದ್ದ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲು

Suddi Udaya

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya

ಶಿಶಿಲ: ಕಾರೆಗುಡ್ಡೆ ದಿ. ಪ್ರವೀಣ್ ರವರ ಮನೆಯವರಿಗೆ ದೀಪಾವಳಿ ಪ್ರಯುಕ್ತ ಬಟ್ಟೆ ಹಾಗೂ ಧನ ಸಹಾಯ

Suddi Udaya

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!