25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆ ಬೆಳ್ತಂಗಡಿ ಇದರ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮವು ಅ.20 ರಂದು ಬೆಳ್ತಂಗಡಿ ಕಸಬಾ ಗ್ರಾಮದ ಕೆಲ್ಲಗುತ್ತು ಬಳಿಯ ಸಂಸ್ಥೆಯ ನಿವೇಶನದಲ್ಲಿ ನಡೆಯಿತು.

ಬೆಳ್ತಂಗಡಿಯ ಪುರೋಹಿತರು ಶ್ರೀಧರ ಭಟ್ ಪೂಜಾ ವಿಧಿ ವಿಧಾನವನ್ನು ನೆರವೇರಿಸಿದರು.

ಮುಖ್ಯ ಅಥಿತಿಗಳಾಗಿ ಸ್ಥಳದಾನಿ ಶ್ರೀಮತಿ ವೀರಮ್ಮ ಅಚ್ಚಿನಡ್ಕ , ಬೆಳ್ತಂಗಡಿ ತಾ. ಕ.ರಾ.ಸ.ನೌ ಸಂಘದ ಗೌರವಾಧ್ಯಕ್ಷ ಡಾ| ಜಯಕೀರ್ತಿ ಜೈನ್, ಬೆಳ್ತಂಗಡಿ ಕರಾ.ಸ.ನೌ ಸಂಘದ ಅಧ್ಯಕ್ಷ ಕೆ. ಜಯರಾಜ್ ಜೈನ್, ಬೆಳ್ತಂಗಡಿ ಶಿಕ್ಷಣಾಧಿಕಾರಿ ಅಧ್ಯಕ್ಷ ತಾರಾಕೇಸರಿ , ಬೆಳ್ತಂಗಡಿ ಪ್ರೌಢ ಶಾಲಾ ಸ.ಶಿ ಸಂಘದ ಅಧ್ಯಕ್ಷ ರಾಧಕೃಷ್ಣ, ಬೆಳ್ತಂಗಡಿ ಗ್ರೂಪ್ ಡಿ ನೌಕರರ ಸಂಘದ ಅಧ್ಯಕ್ಷ ಶ್ರೀಮತಿ ಜಯಶೀಲ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೌಕರರ ಸಂಘದ ಶ್ರೀಮತಿ ಕುಸುಮಾವತಿ, ಜೊತೆಕಾರ್ಯದರ್ಶಿ ಶ್ರೀಮತಿ ಕೆ. ವಾರಿಜ, ಕೋಶಾಧಿಕಾರಿ ಬಿ ಜಗನ್ನಿವಾಸರಾವ್, ಟ್ರಸ್ಟಿಗಳಾದ ಸೂರಪ್ಪ ಪೂಜಾರಿ , ವಸಂತ ಸುವರ್ಣ ಉಪಸ್ಥಿತರಿದ್ದರು.

ನೌಕರರ ಸಂಘದ ಅಧ್ಯಕ್ಷರು ವಿಠಲ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಪದ್ಮ ಕುಮಾರ್ ನಿರೂಪಿಸಿದರು. ಉಪಾಧ್ಯಕ್ಷ ಸನ್ಮತ್ ಕುಮಾರ್ ಧನ್ಯವಾದವಿತ್ತರು.

Related posts

ಮಡಂತ್ಯಾರು ನಿಯತಿ ನೃತ್ಯ ನಿಕೇತನ ಕಲಾಶಾಲೆ ತಂಡದಿಂದ ಮಡಿಕೇರಿ ದಸರಾದಲ್ಲಿ ನೃತ್ಯಾಂಜಲಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya

ಸುಲ್ಕೇರಿ ಮೊಗ್ರು ದ.ಕ.ಜಿ.ಪಂ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya
error: Content is protected !!