22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆ ಬೆಳ್ತಂಗಡಿ ಇದರ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮವು ಅ.20 ರಂದು ಬೆಳ್ತಂಗಡಿ ಕಸಬಾ ಗ್ರಾಮದ ಕೆಲ್ಲಗುತ್ತು ಬಳಿಯ ಸಂಸ್ಥೆಯ ನಿವೇಶನದಲ್ಲಿ ನಡೆಯಿತು.

ಬೆಳ್ತಂಗಡಿಯ ಪುರೋಹಿತರು ಶ್ರೀಧರ ಭಟ್ ಪೂಜಾ ವಿಧಿ ವಿಧಾನವನ್ನು ನೆರವೇರಿಸಿದರು.

ಮುಖ್ಯ ಅಥಿತಿಗಳಾಗಿ ಸ್ಥಳದಾನಿ ಶ್ರೀಮತಿ ವೀರಮ್ಮ ಅಚ್ಚಿನಡ್ಕ , ಬೆಳ್ತಂಗಡಿ ತಾ. ಕ.ರಾ.ಸ.ನೌ ಸಂಘದ ಗೌರವಾಧ್ಯಕ್ಷ ಡಾ| ಜಯಕೀರ್ತಿ ಜೈನ್, ಬೆಳ್ತಂಗಡಿ ಕರಾ.ಸ.ನೌ ಸಂಘದ ಅಧ್ಯಕ್ಷ ಕೆ. ಜಯರಾಜ್ ಜೈನ್, ಬೆಳ್ತಂಗಡಿ ಶಿಕ್ಷಣಾಧಿಕಾರಿ ಅಧ್ಯಕ್ಷ ತಾರಾಕೇಸರಿ , ಬೆಳ್ತಂಗಡಿ ಪ್ರೌಢ ಶಾಲಾ ಸ.ಶಿ ಸಂಘದ ಅಧ್ಯಕ್ಷ ರಾಧಕೃಷ್ಣ, ಬೆಳ್ತಂಗಡಿ ಗ್ರೂಪ್ ಡಿ ನೌಕರರ ಸಂಘದ ಅಧ್ಯಕ್ಷ ಶ್ರೀಮತಿ ಜಯಶೀಲ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೌಕರರ ಸಂಘದ ಶ್ರೀಮತಿ ಕುಸುಮಾವತಿ, ಜೊತೆಕಾರ್ಯದರ್ಶಿ ಶ್ರೀಮತಿ ಕೆ. ವಾರಿಜ, ಕೋಶಾಧಿಕಾರಿ ಬಿ ಜಗನ್ನಿವಾಸರಾವ್, ಟ್ರಸ್ಟಿಗಳಾದ ಸೂರಪ್ಪ ಪೂಜಾರಿ , ವಸಂತ ಸುವರ್ಣ ಉಪಸ್ಥಿತರಿದ್ದರು.

ನೌಕರರ ಸಂಘದ ಅಧ್ಯಕ್ಷರು ವಿಠಲ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಪದ್ಮ ಕುಮಾರ್ ನಿರೂಪಿಸಿದರು. ಉಪಾಧ್ಯಕ್ಷ ಸನ್ಮತ್ ಕುಮಾರ್ ಧನ್ಯವಾದವಿತ್ತರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya

ಪೆರಿಂಜೆ ಎಸ್‌ಡಿಎಂ ಅನುದಾನಿತ ಪ್ರೌಢಶಾಲೆಗೆ ಶೇ.96 ಫಲಿತಾಂಶ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಸದಸ್ಯೆಯ ತಂಡದಿಂದ ಹಲ್ಲೆ: ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಖಂಡನೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya
error: Content is protected !!