September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

ಬೆಳ್ತಂಗಡಿ: ದೇವಸ್ಥಾನ ಮಠ ಮಂದಿರಗಳಲ್ಲಿ ಭಕ್ತರೀಗೆ ಸಂಸ್ಕಾರ ಸಂಸ್ಕ್ರತಿ ತಿಳಿಸುವಂತಹ ಕೆಲಸವಾಗಬೇಕು ಸಂಸ್ಕಾರ ಈ ಸಮಯದಲ್ಲಿ ಉಳಿದಿದ್ರೆ ಅದು ಕನ್ನಡ ಮಾದ್ಯಮದಲ್ಲಿ ಮಾತ್ರ ಮಕ್ಕಳಿಗೆ ಧಾರ್ಮಿಕ ವಿಚಾರವನ್ನು ತಿಳಿಸುವ ಹೆತ್ತವರ ಕರ್ತವ್ಯವಾಗಿದೆ ಎಂದು ಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರು ಶ್ರೀ ಶ್ರೀ ಈಶ ವಿಠಲದಾಸ ಸ್ವಾಮಿಜಿ ನುಡಿದರು.

ಅವರು ಅ 20 ರಂದು ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆಯಲ್ಲಿ ಜರಗಿದ ಪ್ರಥಮ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ಧಾರ್ಮಿಕ ಸಭೆಯ  ಅಧ್ಯಕ್ಷತೆಯನ್ನು ಶಶಿಧರ ಶೆಟ್ಟಿ ಉದ್ಯಮಿಗಳು ತುಳು ಸಂಘ ಬರೋಡಾ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಶಾಂತ್ ಪಾರೆಂಕಿ ಆಗಮಿಸಿದ್ದರು. ವೇದಿಕೆಯಲ್ಲಿ ಶಾರದೋತ್ಸವ ಸಮಿತಿ ಅಧ್ಯಕ್ಷ ನಿತೇಶ್ ಕೆ ಓಡಿಲ್ನಾಳ, ಗೌರವಾಧ್ಯಕ್ಷ ರಾಮಣ್ಣ ಕುಲಾಲ್ ಕೋಲಾಜೆ, ವ್ಯವಸ್ಥಾಪನಾ‌ ಸಮಿತಿ‌ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಸುದೀಪ್ ಶೆಟ್ಟಿ ಸ್ವಾಗತಿಸಿ, ಮಹೇಶ್ ಲಾಯಿಲ ಕಾರ್ಯಕ್ರಮ ನಿರೂಪಿಸಿದರು. ನಿತೇಶ್ ಕೆ ಧನ್ಯವಾದ ವಿತ್ತರು. ಬೆಳಿಗ್ಗೆ ದೇವತಾ‌ ಪ್ರಾರ್ಥನೆಯೊಂದಿಗೆ ಶಾರದಾ ದೇವಿಯ ಪ್ರತಿಷ್ಠಾಪನೆ ಮಹಾಪೂಜೆ ಪ್ರಸಾದ ವಿತರಣೆ ಸಾರ್ವಜನಿಕ ಅನ್ನ ಸಂತರ್ಪಣೆ ಸಾಂಸ್ಕ್ರತಿ ಕಾರ್ಯಕ್ರಮ ಪ್ರಸಿದ್ದ ಕಲಾವಿದರಿಂದ ತಾಳಮದ್ದಳೆ ಜರಗಿತು.

Related posts

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಕೇರಳ ಹೊಟೇಲ್ ಮಾಲಕನ ಹತ್ಯೆ ಪ್ರಕರಣ: ಹೊಟೇಲ್ ಕೆಲಸಗಾರ ಬೆಳ್ತಂಗಡಿಯ ಯುವಕ ಬಂಧನ

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

Suddi Udaya
error: Content is protected !!