September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

ಬೆಳ್ತಂಗಡಿ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ (ತಾಳೆ ಎಣ್ಣೆ) ಯೋಜನೆಯಡಿ 2023 -24ನೇ ಸಾಲಿನಲ್ಲಿ ತಾಳೆ ಬೆಳೆ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳುವ ರೈತರಿಗೆ ಪ್ರೋತ್ಸಾಹಧನ ಲಭ್ಯವಿದೆ. ಆಸಕ್ತ ರೈತರು ತಮ್ಮ ಜಮೀನಿನ ಪಹಣಿ (RTC) ಮತ್ತು ಆಧಾರ್ ಪ್ರತಿ ಹಾಗೂ ಅರ್ಜಿಯೊಂದಿಗೆ ನ.30 ರೊಳಗೆ ತೋಟಗಾರಿಕೆ ಇಲಾಖೆ (ಜಿ ಪಂ) ಬೆಳ್ತಂಗಡಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದು.

ತಾಳೆಬೆಳೆ ಬೆಳೆಯಲು ತೋಟಗಾರಿಕೆ ಇಲಾಖೆಯಿಂದ ಅನುಮೋದಿತ ಕಂಪನಿಗಳಿಂದ ಗಿಡಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ, ಗಿಡಗಳ ನಿರ್ವಹಣೆಗೆ ಮೂರು ವರ್ಷಗಳ ನಿರ್ವಹಣ ವೆಚ್ಛ ಫಸಲನ್ನು ಖರೀದಿಸಲು ಕಂಪನಿಯವರಿಂದ ಅನುಕೂಲವೂ ಇದೆ. ತಾಳೆ ಬೆಳೆ ಬೆಂಬಲ ಬೆಲೆಯೂ ದೊರೆಯಲಿದೆ. ಹನಿ ನೀರಾವರಿ ಯಾಂತ್ರಿಕರಣ ಸಹಾಯಧನ ಸೌಲಭ್ಯವಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಬೆಳ್ತಂಗಡಿ ಹೋಬಳಿ ಮಹಾವೀರ ಶೇಬಣ್ಣವರ 8123921087, ವೇಣೂರು ಹೋಬಳಿ ಭೀಮರಾಯ ಸೊಡ್ಡಗಿ ಮೊಬೈಲ್ ನಂ: 9741713598, ಕೊಕ್ಕಡ ಹೋಬಳಿ ಮಲ್ಲಿನಾಥ ಬಿರಾದಾರ, ಮೊಬೈಲ್ ನಂ: 9986411477, ಸಹಾಯಕ ತೋಟಗಾರಿಕೆ ನಿರ್ದೇಶಕರು ಕೆ.ಎಸ್‌. ಚಂದ್ರಶೇಖರ್, ಮೊಬೈಲ್ ನಂ: 9448336863 ಸಂಪರ್ಕಿಸಬಹುದು.

Related posts

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

Suddi Udaya

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

Suddi Udaya

ವಾಣಿ ಪಿಯು ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಮಚ್ಚಿನ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಸಂಪೂರ್ಣ ಸುರಕ್ಷ ಕಾರ್ಡ್ ವಿತರಣೆ

Suddi Udaya
error: Content is protected !!