25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

ವೇಣೂರು : ನೂರುಲ್ ಹುದಾ ಅರೆಬಿಕ್ ಮದ್ರಸ ಪೆರಿಂಜೆ ಇದರ ಸಭಾಂಗಣದಲ್ಲಿ ಮಿಲಾದ್ ಆಚರಣೆಯ ಪ್ರಯುಕ್ತ ಪೆರಿಂಜೆ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮವು ಮದ್ರಸ ಆಡಳಿತ ಸಮಿತಿ ಅಧ್ಯಕ್ಷ ಸ್ವಾದಿಕ್ ಪೆರಿಂಜೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಪಡ್ದಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿ ಖತೀಬ್ ಅಶ್ರಫ್ ಫೈಝಿ ಅರ್ಕಾಣ ರವರು ಉದ್ಘಾಟಿಸಿದರು.

ಯಾಕೂಬ್ ಪೆರಿಂಜೆಯವರು ಆಸಂಶ ಮಾಡಿದ ನಂತರ ಸಭೆಯಲ್ಲಿ ಖತೀಬ್, ಸದರ್, ಮತ್ತು ನೂರುಲ್ ಹುಧಾ ಜುಮ್ಮಾ ಮಸೀದಿ ಪಡ್ಡಂದಡ್ಕ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ,ಹಿರಿಯರಾದ ಪಿ.ಉಸ್ಮಾನ್ ರವರನ್ನು ಸನ್ಮಾನಿಸಲಾಯಿತು. ಝೈನುದ್ದೀನ್, ಅಬೂಬಕ್ಕರ್, ರಫೀಕ್, ಹನೀಫ್, ಅಬ್ದುಲ್ ಖಾದರ್ ಮತ್ತು ಜಮಾತ್ ಬಾಂದವರು ಉಪಸ್ಥಿತರಿದ್ದರು

ಕಾರ್ಯಕ್ರಮದಲ್ಲಿ ಎಸ್ ಕೆ ಎಸ್ ಬಿ ವಿ ಅಧ್ಯಕ್ಷ ಅಫ್ಲಳ್ ಕಿರಾಅತ್ ಪಠಿಸಿದರು. ಕಾರ್ಯಕ್ರಮದ ರೂವಾರಿ ಅಲ್ತಾಫ್ ಮುಸ್ಲಿಯಾರ್ ಸದರ್ ಮುಅಲ್ಲಿಂ ನೂರುಲ್ ಹುದಾ ಮದ್ರಸ ಪೆರಿಂಜೆಯವರು ಪ್ರಾಸ್ತಾವಿಕವಾಗಿ ಮಾತಾಡಿದರು. ಸ್ವಾದಿಕ್ ಪೆರಿಂಜೆಯವರು ಸ್ವಾಗತಿಸಿದರು.

Related posts

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

Suddi Udaya
error: Content is protected !!