24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ : ಸ್ವಯಂ ಪ್ರಭ ಎಂಟರ್ಟೈನ್ಮೆಂಟ್ ಆಂಡ್ ಪ್ರೊಡಕ್ಷನ್ಸ್ ಹಾಗೂ ಬೋಧಿ ಪ್ರೊಡಕ್ಷನ್ ಪ್ರಸ್ತುತ ಪಡಿಸುವ, ಟಾಕೀಸ್ ಆಪ್ ನಲ್ಲಿ ಬಿಡುಗಡೆಗೊಳ್ಳಲಿರುವ ಯುವ ಪ್ರತಿಭೆ ತುಷಾರ್ ಹೆಗ್ಡೆ ವೇಣೂರು ನಿರ್ದೇಶಿಸಿದ ತುಳು ವೆಬ್ ಸೀರೀಸ್ ಕಸರತ್ತ್ ಇದರ ಮೊದಲ ಪೋಸ್ಟರ್ ಬಿಡುಗಡೆಗೊಂಡಿದೆ.

ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ಜೀ ಕನ್ನಡ ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಿತೇಶ್ ಕಾಪಿನಡ್ಕ, ಸೂರಜ್ ಕುಮಾರ್, ರಾಕೇಶ್ ಪೂಜಾರಿ ಮುಖ್ಯ ಭೂಮಿಕೆಯ ಈ ಸೀರೀಸ್ ನಲ್ಲಿ ನವ್ಯಾ ಪೂಜಾರಿ ನಾಯಕಿಯಾಗಿ ನಟಿಸಿದ್ದಾರೆ . ಮೊದಲ ಬಾರಿಗೆ ಜೀ ಕನ್ನಡ ಕಾಮಿಡಿ ಖಿಲಾಡಿ ಅನೀಶ್ ಅಮೀನ್ ವೇಣೂರು ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ ಜೊತೆ ಗೆ ಮುಖ್ಯ ಪಾತ್ರಗಳಲ್ಲಿ ಜೀ ಕನ್ನಡ ಕಾಮಿಡಿ ಖಿಲಾಡಿ ಖ್ಯಾತಿಯ ಪ್ರವೀಣ್ ಜೈನ್, ಧೀರಜ್ ನೀರುಮಾರ್ಗ, ರಾಧೇಶ್ ಶೆಣೈ, ದಿವ್ಯ ಅಂಚನ್ ವೇಣೂರು ನಟಿಸಿದ್ದಾರೆ.


ಜೊತೆಗೆ ಚಂದ್ರಶೇಖರ್ ಹೊಕ್ಕಡಿಗೋಳಿ, ಮನೀಶ್ ಶೆಟ್ಟಿ, ಸುಕೇಶ್ ವೇಣೂರು, ದೀಕ್ಷಿತ್ ಅಂಡಿಂಜೆ, ನಿಶಿತ್ ಶೆಟ್ಟಿ ಮುಂತಾದ ಕಾಮಿಡಿ ದಿಗ್ಗಜರು ಈ ಚಿತ್ರದಲ್ಲಿ ನಟಿಸಿದ್ದಾರೆ.


ಕೆ ರತ್ನಾಕರ್ ಕಾಮತ್ ಅವರು ನಿರ್ಮಿಸಿ; ಗಣೇಶ್ ಎಂ ಉಜಿರೆ, ರಿತೇಶ್ ಗೌಡ ವೇಣೂರು, ನೆಲ್ವಿಸ್ಟರ್ ಗ್ಲಾನ್ ಪಿಂಟೋ ಸಹಕಾರದ ಈ ಚಿತ್ರಕ್ಕೆ ಮಾನಸ ಹೊಳ್ಳ ಅವರ ಸಂಗೀತ, ಸಂತೋಷ್ ಗುಂಪಾಲಜೆ ಅವರ ಛಾಯಾಗ್ರಾಹಣ, ಗಣೇಶ್ ನಿರ್ಚಲ್ ಅವರ ಸಂಕಲನ, ಸುಕೇಶ್ ಶೆಟ್ಟಿ ಅವರ ಸಾಹಿತ್ಯ, ಕಾಮಿಡಿ ಕಿಲಾಡಿ ಸೂರಜ್ ಕುಮಾರ್ ಅವರ ನೃತ್ಯ ನಿರ್ದೇಶನ, ಅವಿನಾಶ್ ನಾತು ಮತ್ತು ಪ್ರಣೀತ್ ಜೈನ್ ಅವರ ಕಲೆ ಈ ಚಿತ್ರಕ್ಕಿದೆ. ಸ್ಮಿತೇಶ್ ಎಸ್ ಬಾರ್ಯ ಮತ್ತು ಅನೀಶ್ ಅಮೀನ್ ವೇಣೂರು ತಾಂತ್ರಿಕ ಮೇಲ್ವಿಚಾರಣೆಯ ಚಿತ್ರಕ್ಕೆ ದೀಕ್ಷಿತ್ ಕೆ ಅಂಡಿಂಜೆ ನಿರ್ಮಾಣ ನಿರ್ವಹಣೆ ಇದೆ. ವಿನಯ್ ಕುಮಾರ್ ಉಜಿರೆ, ನಿರಾಜ್ ಕುಂಜಾರ್ಪ, ದೀಕ್ಷಿತ್ ಭಂಡಾರಿ, ನಿಶಿತ್ ಶೆಟ್ಟಿ ನಿರ್ದೇಶನ ತಂಡದಲ್ಲಿ ಸಹಕಾರಿಸಿದ್ದಾರೆ. ಈ ಸೀರೀಸ್ ಆದಷ್ಟು ಶೀಘ್ರದಲ್ಲಿ ಟಾಕೀಸ್ ಆಪ್ ನಲ್ಲಿ ಬಿಡುಗಡೆಗೊಳ್ಳಲಿದೆ.

Related posts

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya

ರೆಖ್ಯ : ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

Suddi Udaya
error: Content is protected !!