July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ : ಸ್ವಯಂ ಪ್ರಭ ಎಂಟರ್ಟೈನ್ಮೆಂಟ್ ಆಂಡ್ ಪ್ರೊಡಕ್ಷನ್ಸ್ ಹಾಗೂ ಬೋಧಿ ಪ್ರೊಡಕ್ಷನ್ ಪ್ರಸ್ತುತ ಪಡಿಸುವ, ಟಾಕೀಸ್ ಆಪ್ ನಲ್ಲಿ ಬಿಡುಗಡೆಗೊಳ್ಳಲಿರುವ ಯುವ ಪ್ರತಿಭೆ ತುಷಾರ್ ಹೆಗ್ಡೆ ವೇಣೂರು ನಿರ್ದೇಶಿಸಿದ ತುಳು ವೆಬ್ ಸೀರೀಸ್ ಕಸರತ್ತ್ ಇದರ ಮೊದಲ ಪೋಸ್ಟರ್ ಬಿಡುಗಡೆಗೊಂಡಿದೆ.

ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ಜೀ ಕನ್ನಡ ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಿತೇಶ್ ಕಾಪಿನಡ್ಕ, ಸೂರಜ್ ಕುಮಾರ್, ರಾಕೇಶ್ ಪೂಜಾರಿ ಮುಖ್ಯ ಭೂಮಿಕೆಯ ಈ ಸೀರೀಸ್ ನಲ್ಲಿ ನವ್ಯಾ ಪೂಜಾರಿ ನಾಯಕಿಯಾಗಿ ನಟಿಸಿದ್ದಾರೆ . ಮೊದಲ ಬಾರಿಗೆ ಜೀ ಕನ್ನಡ ಕಾಮಿಡಿ ಖಿಲಾಡಿ ಅನೀಶ್ ಅಮೀನ್ ವೇಣೂರು ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ ಜೊತೆ ಗೆ ಮುಖ್ಯ ಪಾತ್ರಗಳಲ್ಲಿ ಜೀ ಕನ್ನಡ ಕಾಮಿಡಿ ಖಿಲಾಡಿ ಖ್ಯಾತಿಯ ಪ್ರವೀಣ್ ಜೈನ್, ಧೀರಜ್ ನೀರುಮಾರ್ಗ, ರಾಧೇಶ್ ಶೆಣೈ, ದಿವ್ಯ ಅಂಚನ್ ವೇಣೂರು ನಟಿಸಿದ್ದಾರೆ.


ಜೊತೆಗೆ ಚಂದ್ರಶೇಖರ್ ಹೊಕ್ಕಡಿಗೋಳಿ, ಮನೀಶ್ ಶೆಟ್ಟಿ, ಸುಕೇಶ್ ವೇಣೂರು, ದೀಕ್ಷಿತ್ ಅಂಡಿಂಜೆ, ನಿಶಿತ್ ಶೆಟ್ಟಿ ಮುಂತಾದ ಕಾಮಿಡಿ ದಿಗ್ಗಜರು ಈ ಚಿತ್ರದಲ್ಲಿ ನಟಿಸಿದ್ದಾರೆ.


ಕೆ ರತ್ನಾಕರ್ ಕಾಮತ್ ಅವರು ನಿರ್ಮಿಸಿ; ಗಣೇಶ್ ಎಂ ಉಜಿರೆ, ರಿತೇಶ್ ಗೌಡ ವೇಣೂರು, ನೆಲ್ವಿಸ್ಟರ್ ಗ್ಲಾನ್ ಪಿಂಟೋ ಸಹಕಾರದ ಈ ಚಿತ್ರಕ್ಕೆ ಮಾನಸ ಹೊಳ್ಳ ಅವರ ಸಂಗೀತ, ಸಂತೋಷ್ ಗುಂಪಾಲಜೆ ಅವರ ಛಾಯಾಗ್ರಾಹಣ, ಗಣೇಶ್ ನಿರ್ಚಲ್ ಅವರ ಸಂಕಲನ, ಸುಕೇಶ್ ಶೆಟ್ಟಿ ಅವರ ಸಾಹಿತ್ಯ, ಕಾಮಿಡಿ ಕಿಲಾಡಿ ಸೂರಜ್ ಕುಮಾರ್ ಅವರ ನೃತ್ಯ ನಿರ್ದೇಶನ, ಅವಿನಾಶ್ ನಾತು ಮತ್ತು ಪ್ರಣೀತ್ ಜೈನ್ ಅವರ ಕಲೆ ಈ ಚಿತ್ರಕ್ಕಿದೆ. ಸ್ಮಿತೇಶ್ ಎಸ್ ಬಾರ್ಯ ಮತ್ತು ಅನೀಶ್ ಅಮೀನ್ ವೇಣೂರು ತಾಂತ್ರಿಕ ಮೇಲ್ವಿಚಾರಣೆಯ ಚಿತ್ರಕ್ಕೆ ದೀಕ್ಷಿತ್ ಕೆ ಅಂಡಿಂಜೆ ನಿರ್ಮಾಣ ನಿರ್ವಹಣೆ ಇದೆ. ವಿನಯ್ ಕುಮಾರ್ ಉಜಿರೆ, ನಿರಾಜ್ ಕುಂಜಾರ್ಪ, ದೀಕ್ಷಿತ್ ಭಂಡಾರಿ, ನಿಶಿತ್ ಶೆಟ್ಟಿ ನಿರ್ದೇಶನ ತಂಡದಲ್ಲಿ ಸಹಕಾರಿಸಿದ್ದಾರೆ. ಈ ಸೀರೀಸ್ ಆದಷ್ಟು ಶೀಘ್ರದಲ್ಲಿ ಟಾಕೀಸ್ ಆಪ್ ನಲ್ಲಿ ಬಿಡುಗಡೆಗೊಳ್ಳಲಿದೆ.

Related posts

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಗುಳಿ ನಾರಾಯಣ ಭಟ್, ಉಪಾಧ್ಯಕ್ಷರಾಗಿ ವಡಿವೇಲು

Suddi Udaya
error: Content is protected !!