34.3 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣೆ

ಬೆಳ್ತಂಗಡಿ : ‘ಮಾತಿನ ಕಲೆ ಬದುಕು ರೂಪಿಸುವ ಕಲೆ. ನಮ್ಮೊಳಗಿನ ಮಾತನ್ನು ವ್ಯಕ್ತಿತ್ವ ರೂಪಿಸುವ ಬಂಡವಾಳವಾಗಿ ರೂಪುಗೊಳಿಸಬೇಕು. ಹಾಗಾಗಿ ಶಾಲಾ ಕಾಲೇಜು ವಲಯದಲ್ಲಿ ಸಿಗುವ ಭಾಷಣ ಸ್ಪರ್ಧೆ ಹಾಗೂ ಚರ್ಚಾ ಸ್ಪರ್ಧೆಯ ಅವಕಾಶವನ್ನು ಉತ್ತಮವಾಗಿ ಬಳಸಿಕೊಂಡು ಸಮಾಜದ ಉತ್ತಮ ಮಾತುಗಾರರಾಗಿ ಮೂಡಿಬರಬೇಕು’ ಎಂದು ಮಾಜಿ ಶಾಸಕ, ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಕೆ. ವಸಂತ ಬಂಗೇರ ಹೇಳಿದರು.

ಅವರು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಮತ್ತು ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಇದರ ದಶಮಾನೋತ್ಸವದ ಪ್ರಯುಕ್ತ ನಡೆದ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿರು.

ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಸಹ ಶಿಕ್ಷಕ ಡಾ. ಪ್ರವೀಣ್ ಮಾತನಾಡಿ, ‘ ಸಂಸ್ಥೆ ಚಿಕ್ಕದಾದರೂ ಉತ್ತಮ ಆಲೋಚನೆ ಮತ್ತು ಗುರಿಯನ್ನು ಹೊಂದಿದೆ. ಭಾಷಣ ಕೇವಲ ಮಾತಿಗೆ ಸೀಮಿತವಾಗಿರದೆ ಅದರ ವಿಚಾರಗಳನ್ನು ತನ್ನ ಬದುಕಿನಲ್ಲಿ ರೂಡಿಸಿಕೊಳ್ಳಬೇಕು’ ಎಂದರು.

ಬೇರೆ ಬೇರೆ ಕಾಲೇಜಿನ ಸ್ಪರ್ಧಾರ್ಥಿಗಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು

ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಶ್ರೀ ಗುರುದೇವ ಕಾಲೇಜಿನ ಹಸ್ತವಿ, ದ್ವಿತೀಯ ಸ್ಥಾನವನ್ನು ಪುತ್ತೂರು ಅಂಬಿಕಾ ಮಹಾವಿದ್ಯಾಲಯದ ಪಂಚಮಿ ಬಾಕಿಲಪದವು, ತೃತೀಯ ಸ್ಥಾನವನ್ನು ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಶುರಾ ಬಿ. ಬಿ., ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ಪರ್ಶ ಮತ್ತು ಮನೋಜ್, ದ್ವಿತೀಯ ಸ್ಥಾನವನ್ನು ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಹಸ್ತವಿ ಮತ್ತು ಚಂದನಾ, ತೃತೀಯ ಸ್ಥಾನವನ್ನು ಉಜಿರೆ ಎಸ್.ಡಿ.ಎಂ ಕಾಲೇಜಿನ ಮಂಜುನಾಥ್ ಮತ್ತು ನಾಗ ಶ್ರೀ ಪಡೆದುಕೊಂಡರು.

ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ ಪ್ರಸ್ತಾವಿಕವಾಗಿ ಮಾತನಾಡಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಹಾಗೂ ಕಾರ್ಯಕ್ರಮ ಸಂಯೋಜಕಿ ಬಬಿತಾ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿಯರಾದ ಪವಿತ್ರ ಕಾರ್ಯಕ್ರಮ ನಿರೂಪಿಸಿ, ಮನುಜ ವಿಜೇತರ ಪಟ್ಟಿ ವಾಚಿಸಿದರು. ಸೌಮ್ಯ ವಂದಿಸಿದರು.

Related posts

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

Suddi Udaya

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!