24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಬೆಳ್ತಂಗಡಿ: ಮಾನವೀಯ ಸಂಬಂಧಗಳ ಮೂಲಕ ಸ್ನೇಹ, ಬಾಂಧವ್ಯ, ರಾಷ್ಟ್ರ ಪ್ರೇಮವನ್ನು ಬೆಳೆಸುವುದೇ ಸಮಾಜ ಸೇವೆಯ ಉದ್ದೇಶವಾಗಿರಬೇಕು ಎಂದು ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರಾದ ಧರಣೇಂದ್ರ ಕೆ.ಜೈನ್ ಹೇಳಿದ್ದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಭಾಷಣ ಮಾಡುತ್ತಾ, ನಾವು ನಮ್ಮನ್ನು ಪ್ರೀತಿಸುತ್ತಾ ಸಕ್ರೀಯವಾಗಿ ತೊಡಗಿಸಿಕೊಂಡು ಸಾಧನೆ ಮಾಡಬೇಕು. ಜೀವನದಲ್ಲಿ ಉತ್ತಮ ಅವಕಾಶಗಳನ್ನು ತಮ್ಮದಾಗಿಸಿಕೊಳ್ಳಬೇಕು. ಹೆತ್ತವರ ಕಣ್ಣಲ್ಲಿ ಆನಂದ ಭಾಷ್ಪ ತರಿಸುವ ವ್ಯಕ್ತಿತ್ವ ನಮ್ಮದಾಗಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಡಿ. ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ, ಜೊತೆ ಕಾರ್ಯದರ್ಶಿಗಳಾದ ಶ್ರೀನಾಥ್ ಕೆ.ಯಂ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್,ಕುವೆಟ್ಟು ಗ್ರಾಮ ಪಂಚಾಯಿತ್ ನ ಉಪಾಧ್ಯಕ್ಷರಾದ ಗಣೇಶ್.ಕೆ, ಓಡಿಲ್ನಾಳ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ನಿರ್ದೇಶಕರಾದ ನಿರಂಜನ್, ನಿವೃತ್ತ ಮುಖ್ಯೋಪಾಧ್ಯಯರಾದ ದತ್ತಾತ್ರೇಯ ಗೊಲ್ಲ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜ ಪ್ರಕಾಶ್ ಶೆಟ್ಟಿ, ಪಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ನಿವೃತ ಶಿಕ್ಷಕರಾದ ಮೋನಪ್ಪ, ಓಡಿಲ್ನಾಳ ಸರಕಾರಿ ಉನ್ನತಿಕರಿಸಿದ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅರುಣ್ ಸುಮಿತ್, ವಾಣಿ ಪದವಿ ಕಾಲೇಜಿನ ಉಪ ಪ್ರಾಂಶುಲರಾದ ವಿಷ್ಣು ಪ್ರಕಾಶ್ ಎಂ ಉಪಸ್ಥಿತರಿದ್ದರು.


ಉಪನ್ಯಾಸಕ ಬೆಳಿಯಪ್ಪ.ಕೆ ಸ್ವಾಗತಿಸಿದರು. ಸಹ ಶಿಬಿರ ಅಧಿಕಾರಿ ಕುಮಾರಿ ಕಾಮಾಕ್ಷಿ ವರದಿ ವಾಚಿಸಿದರು. ಶಿಬಿರಧಿಕಾರಿ ಶಂಕರ್ ರಾವ್. ಬಿ ಧನ್ಯವಾದ ಸಲ್ಲಿಸಿದರು. ಉಪನ್ಯಾಸಕಿ ಶ್ರೀಮತಿ ರಕ್ಷಾ ಕಾರ್ಯಕ್ರಮ ನಿರೂಪಿಸಿದರು. ವಾಚಿಸಿದರು. ಶಿಬಿರಧಿಕಾರಿ ಶಂಕರ್ ರಾವ್. ಬಿ ಧನ್ಯವಾದ ಸಲ್ಲಿಸಿದರು. ಉಪನ್ಯಾಸಕಿ ಶ್ರೀಮತಿ ರಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಡಿ. 02: ಉಜಿರೆಯಲ್ಲಿ ಜಿಲ್ಲಾಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ

Suddi Udaya

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಮೋಹಿತ್ ತೃತೀಯ ಸ್ಥಾನ

Suddi Udaya
error: Content is protected !!