28.6 C
ಪುತ್ತೂರು, ಬೆಳ್ತಂಗಡಿ
March 31, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

ಉಜಿರೆ: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ ಇವರ ಜಂಟಿ ಆಶ್ರಯದಲ್ಲಿ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ ಅ.21ರಂದು ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣ ಉಜಿರೆಯಲ್ಲಿ ಜರುಗಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಧನರಾಜ್ ಪಿ.ಎಂ ನೆರವೇರಿಸಿದರು.ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರುರಾದ ಪ್ರಮೋದ್ ಕುಮಾರ್. ಬಿ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅಬ್ಯಾಗತರಾದ ವಿನಯಚಂದ್ರ ಆಳ್ವ ಗಸ್ತು ವನಪಾಲಕ ಅರಣ್ಯ ಇಲಾಖೆ ಬೆಳಾಲು ಇವರು ಉಪಸ್ಥಿತರಿದ್ದರು.

ಮಹಾವೀರ್ ಜೈನ್ ಕಾರ್ಯಕ್ರಮ ನಿರೂಪಿಸಿದರು. ದೀಕ್ಷಿತ್ ರೈ ಸ್ವಾಗತಿಸಿದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ನಿವೃತ್ತ ಪ್ರಾಂಶುಪಾಲರು ಪ್ರೊ. ಎನ್ ದಿನೇಶ್ ಚೌಟ ಆಗಮಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಿದರು. ಜಿಲ್ಲಾ ಕ್ರೀಡಾ ಸಂಯೋಜಕರು ಅರುಣ್ ಡಿ ಸೋಜಾ, ಉಪಪ್ರಾಂಶುಪಾಲರಾದ ರಾಜೇಶ್ , ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್, ನವೀನ್ ಜೈನ್ ಪದವಿಪೂರ್ವ ಕಾಲೇಜ್ ಮೂಡಬಿದ್ರೆ ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಪೂಂಜಾ ಕಾರ್ಯಕ್ರಮ ನಿರೂಪಿಸಿದರು. ಸುನಿಲ್ ಪಿ.ಜೆ ವಂದಿಸಿದರು.

ಬಾಲಕರ ವಿಭಾಗದಲ್ಲಿ ಒಟ್ಟು 10 ಕಾಲೇಜುಗಳ 46 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಒಟ್ಟು 7 ಕಾಲೇಜುಗಳ36 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು.

ಬಾಲಕರ ವಿಭಾಗದಲ್ಲಿ ಪ್ರಥಮ: ಯಶವಂತ್ ಕೆ, ದ್ವಿತೀಯ:ಚಿರೇಶ್ ಗೌಡ,ತೃತೀಯ: ರಘುವೀರ ಆಳ್ವಾಸ್ ಕಾಲೇಜು ಮೂಡಬಿದ್ರೆ ನಾಲ್ಕನೇ ಸ್ಥಾನ : ಆದಿತ್ಯ ಎ ನ್. ಪೀ ಹಾಗೂ ಐದನೇ ಸ್ಥಾನ : ನಿತಿನ್ ಯು. ಎಲ್ ಉಜಿರೆ ಹಾಗೂ ಶ್ರಾವಣ ಕೆ. ಪಿ ಸೈಂಟ್ ಫಿಲೋಮಿನಾ ಆರನೇ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಚಿತ್ರ ಟಿ. ದ್ವಿತೀಯ ಸ್ಥಾನ: ಪೀ ಗೀತಾ ಬಿ ಆಳ್ವಾಸ್ ಕಾಲೇಜು, ತೃತೀಯ ಸ್ಥಾನ ಶ್ರದ್ದಾ ಎಸ್ ಎಸ್ ಪಿಯು ಕಾಲೇಜು ಸುಬ್ರಹ್ಮಣ್ಯ, ನಾಲ್ಕನೇ ಸ್ಥಾನ ರೀತು ಶ್ರೀ , ಐದನೇ ಸ್ಥಾನ ಪ್ರಮೀಳಾ ಎಸ್.ಜಿ, ಆರನೇ ಸ್ಥಾನ ದೀಕ್ಷಿತ ಬೆಥನಿ ಪಿಯುಸಿ ಕಾಲೇಜು ನುಜಿಬಳ್ತಿಲ ಪಡೆದು ಮೊದಲ ಆರು ಸ್ಪರ್ಧಿಗಳು ಪದಕ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

ಬಾಲಕರ ವಿಭಾಗದಲ್ಲಿ ಪ್ರಥಮ ಆಳ್ವಾಸ್ , ದ್ವಿತೀಯ ಎಸ್ ಡಿ ಎಂ ಕಾಲೇಜು ಉಜಿರೆ, ತೃತೀಯ ಬೆಥನಿ ಪಿಯು ಕಾಲೇಜು ನುಜಿಬಳ್ತಿಲ, ಬಾಲಕಿಯರ ವಿಭಾಗದಲ್ಲಿ ಪ್ರಥಮ ಆಳ್ವಾಸ್, ದ್ವಿತೀಯ ಬೆಥನಿ ಪಿಯು ಕಾಲೇಜು ನೂಜಿಬಳ್ತಿಲ, ತೃತೀಯ ಎಸ್ ಡಿ ಎಂ ಪಿಯು ಕಾಲೇಜು ಉಜಿರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

Suddi Udaya

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಏಳನೇ ದಿನದ ಬ್ರಹ್ಮ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಕೊಲೆ ಯತ್ನ ಖಂಡನೀಯ: ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ.

Suddi Udaya

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

Suddi Udaya
error: Content is protected !!