26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಬೆಳ್ತಂಗಡಿ: ಮಾನವೀಯ ಸಂಬಂಧಗಳ ಮೂಲಕ ಸ್ನೇಹ, ಬಾಂಧವ್ಯ, ರಾಷ್ಟ್ರ ಪ್ರೇಮವನ್ನು ಬೆಳೆಸುವುದೇ ಸಮಾಜ ಸೇವೆಯ ಉದ್ದೇಶವಾಗಿರಬೇಕು ಎಂದು ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರಾದ ಧರಣೇಂದ್ರ ಕೆ.ಜೈನ್ ಹೇಳಿದ್ದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಭಾಷಣ ಮಾಡುತ್ತಾ, ನಾವು ನಮ್ಮನ್ನು ಪ್ರೀತಿಸುತ್ತಾ ಸಕ್ರೀಯವಾಗಿ ತೊಡಗಿಸಿಕೊಂಡು ಸಾಧನೆ ಮಾಡಬೇಕು. ಜೀವನದಲ್ಲಿ ಉತ್ತಮ ಅವಕಾಶಗಳನ್ನು ತಮ್ಮದಾಗಿಸಿಕೊಳ್ಳಬೇಕು. ಹೆತ್ತವರ ಕಣ್ಣಲ್ಲಿ ಆನಂದ ಭಾಷ್ಪ ತರಿಸುವ ವ್ಯಕ್ತಿತ್ವ ನಮ್ಮದಾಗಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಡಿ. ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ, ಜೊತೆ ಕಾರ್ಯದರ್ಶಿಗಳಾದ ಶ್ರೀನಾಥ್ ಕೆ.ಯಂ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್,ಕುವೆಟ್ಟು ಗ್ರಾಮ ಪಂಚಾಯಿತ್ ನ ಉಪಾಧ್ಯಕ್ಷರಾದ ಗಣೇಶ್.ಕೆ, ಓಡಿಲ್ನಾಳ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ನಿರ್ದೇಶಕರಾದ ನಿರಂಜನ್, ನಿವೃತ್ತ ಮುಖ್ಯೋಪಾಧ್ಯಯರಾದ ದತ್ತಾತ್ರೇಯ ಗೊಲ್ಲ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜ ಪ್ರಕಾಶ್ ಶೆಟ್ಟಿ, ಪಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ನಿವೃತ ಶಿಕ್ಷಕರಾದ ಮೋನಪ್ಪ, ಓಡಿಲ್ನಾಳ ಸರಕಾರಿ ಉನ್ನತಿಕರಿಸಿದ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅರುಣ್ ಸುಮಿತ್, ವಾಣಿ ಪದವಿ ಕಾಲೇಜಿನ ಉಪ ಪ್ರಾಂಶುಲರಾದ ವಿಷ್ಣು ಪ್ರಕಾಶ್ ಎಂ ಉಪಸ್ಥಿತರಿದ್ದರು.


ಉಪನ್ಯಾಸಕ ಬೆಳಿಯಪ್ಪ.ಕೆ ಸ್ವಾಗತಿಸಿದರು. ಸಹ ಶಿಬಿರ ಅಧಿಕಾರಿ ಕುಮಾರಿ ಕಾಮಾಕ್ಷಿ ವರದಿ ವಾಚಿಸಿದರು. ಶಿಬಿರಧಿಕಾರಿ ಶಂಕರ್ ರಾವ್. ಬಿ ಧನ್ಯವಾದ ಸಲ್ಲಿಸಿದರು. ಉಪನ್ಯಾಸಕಿ ಶ್ರೀಮತಿ ರಕ್ಷಾ ಕಾರ್ಯಕ್ರಮ ನಿರೂಪಿಸಿದರು. ವಾಚಿಸಿದರು. ಶಿಬಿರಧಿಕಾರಿ ಶಂಕರ್ ರಾವ್. ಬಿ ಧನ್ಯವಾದ ಸಲ್ಲಿಸಿದರು. ಉಪನ್ಯಾಸಕಿ ಶ್ರೀಮತಿ ರಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

Suddi Udaya

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

Suddi Udaya

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya
error: Content is protected !!