ನಾರಾವಿ : ನಾರಾವಿ ಚರ್ಚ್ ರೋಡ್ ಬಳಿ ನಾರಾವಿ-ಕಾರ್ಕಳ ಸಾರ್ವಜನಿಕ ರಸ್ತೆಯಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗೆ ಕಾರು ಡಿಕ್ಕಿ ಹೊಡೆದು ಪಾದಚಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.
ಅ. 21 ರಂದು ರಾತ್ರಿ ಸುಮಾರು 10.50 ಗಂಟೆಗೆ ನಾರಾವಿ ಗ್ರಾಮದ ನಾರಾವಿ ಚರ್ಚ್ ರೋಡ್ ಬಳಿ ನಾರಾವಿ-ಕಾರ್ಕಳ ಸಾರ್ವಜನಿಕ ರಸ್ತೆಯಲ್ಲಿ ಕಾರು ನಂಬ್ರ ಕೆಎ 19 ಎಮ್ .ಎ 685 ಇದರ ಚಾಲಕ ಚೇತನ್ ರಾಜ್ ಎಂಬವರು ಕಾರ್ಕಳ ಕಡೆಯಿಂದ ನಾರಾವಿ ಕಡೆಗೆ ದುಡುಕುತನ ಹಾಗೂ ನಿರ್ಲಕ್ಷತನದಿಂದ ಒಮ್ಮೆಲೇ ರಸ್ತೆಯ ರಾಂಗ್ ಸೈಡಿಗೆ ಚಲಾಯಿಸಿದ ಪರಿಣಾಮ ಓಡಿಲ್ನಾಳ ಗ್ರಾಮದ ಕಟ್ಟದಬೈಲು ಮನೆ ನಿವಾಸಿ ಶ್ರೀಮತಿ ಬಬಿತಾ ಅವರ ಗಂಡ: ಸುಧಾಕರ ಪೂಜಾರಿ, ಹಾಗೂ ಮಹೇಶರವರು ನಡೆದುಕೊಂಡು ಬರುತ್ತಿರುವ ಸಮಯ ಬಬಿತರವರ ಬಲಗೈಗೆ ತಾಗಿ ಅವರ ಹಿಂದಿನಿಂದ ಬರುತ್ತಿದ್ದ ಮಹೇಶ ಎಂಬವರಿಗೆ ರಭಸದಿಂದ ಡಿಕ್ಕಿ ಹೊಡೆದಿತ್ತು ಎನ್ನಲಾಗಿದೆ .
ಡಿಕ್ಕಿ ಹೊಡೆದ ಪರಿಣಾಮ ಮಹೇಶರವರು ರಸ್ತೆಗೆ ಬಿದ್ದು ತಲೆಗೆ, ಮುಖಕ್ಕೆ ಹಾಗೂ ಕೈ-ಕಾಲುಗಳಿಗೆ ತೀವ್ರ ಗಾಯಗಳಾಗಿದ್ದು , ಪ್ರಜ್ಙಾ ಹೀನರಾಗಿದ್ದವರನ್ನು ಕೂಡಲೇ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಣಿಪಾಲ ಕೆ. ಎಂ. ಸಿ ಆಸ್ಪತ್ರೆಗೆ ಕರೆದು ಹೋದಾಗ ವೈದ್ಯರು ಪರೀಕ್ಷಿಸಿ ಮಹೇಶರವರು ಮೃತಪಟ್ಟಿರುವುದಾಗಿ ತಿಳಿಸಿದರು.
ಕೈಗೆ ಗಾಯದ ಬಬಿತಾ ಅವರು ಅ. 22 ರಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಈ ಬಗ್ಗೆ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.
ಕಾರು ಚಾಲಕ ಚೇತನ್ ರಾಜ್ ಎಂಬವರ ಮೇಲೆ ವೇಣೂರು ಪೊಲೀಸ್ ಠಾಣಾ 70/2023 ಕಲಂ: 279, 337, 304(A) IPC ಕೇಸು ದಾಖಲಾಗಿದೆ.











