24.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತ

ನಾರಾವಿ ಚರ್ಚ್‌ ರೋಡ್‌ ಬಳಿ ಕಾರು ಡಿಕ್ಕಿ : ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ಮೃತ್ಯು

ನಾರಾವಿ : ನಾರಾವಿ ಚರ್ಚ್‌ ರೋಡ್‌ ಬಳಿ ನಾರಾವಿ-ಕಾರ್ಕಳ ಸಾರ್ವಜನಿಕ ರಸ್ತೆಯಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗೆ ಕಾರು ಡಿಕ್ಕಿ ಹೊಡೆದು ಪಾದಚಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.

ಅ. 21 ರಂದು ರಾತ್ರಿ ಸುಮಾರು 10.50 ಗಂಟೆಗೆ ನಾರಾವಿ ಗ್ರಾಮದ ನಾರಾವಿ ಚರ್ಚ್‌ ರೋಡ್‌ ಬಳಿ ನಾರಾವಿ-ಕಾರ್ಕಳ ಸಾರ್ವಜನಿಕ ರಸ್ತೆಯಲ್ಲಿ ಕಾರು ನಂಬ್ರ ಕೆಎ 19 ಎಮ್‌ .ಎ 685 ಇದರ ಚಾಲಕ ಚೇತನ್ ರಾಜ್ ಎಂಬವರು ಕಾರ್ಕಳ ಕಡೆಯಿಂದ ನಾರಾವಿ ಕಡೆಗೆ ದುಡುಕುತನ ಹಾಗೂ ನಿರ್ಲಕ್ಷತನದಿಂದ ಒಮ್ಮೆಲೇ ರಸ್ತೆಯ ರಾಂಗ್‌ ಸೈಡಿಗೆ ಚಲಾಯಿಸಿದ ಪರಿಣಾಮ ಓಡಿಲ್ನಾಳ ಗ್ರಾಮದ ಕಟ್ಟದಬೈಲು ಮನೆ ನಿವಾಸಿ ಶ್ರೀಮತಿ ಬಬಿತಾ ಅವರ ಗಂಡ: ಸುಧಾಕರ ಪೂಜಾರಿ, ಹಾಗೂ ಮಹೇಶರವರು ನಡೆದುಕೊಂಡು ಬರುತ್ತಿರುವ ಸಮಯ ಬಬಿತರವರ ಬಲಗೈಗೆ ತಾಗಿ ಅವರ ಹಿಂದಿನಿಂದ ಬರುತ್ತಿದ್ದ ಮಹೇಶ ಎಂಬವರಿಗೆ ರಭಸದಿಂದ ಡಿಕ್ಕಿ ಹೊಡೆದಿತ್ತು ಎನ್ನಲಾಗಿದೆ .

ಡಿಕ್ಕಿ ಹೊಡೆದ ಪರಿಣಾಮ ಮಹೇಶರವರು ರಸ್ತೆಗೆ ಬಿದ್ದು ತಲೆಗೆ, ಮುಖಕ್ಕೆ ಹಾಗೂ ಕೈ-ಕಾಲುಗಳಿಗೆ ತೀವ್ರ ಗಾಯಗಳಾಗಿದ್ದು , ಪ್ರಜ್ಙಾ ಹೀನರಾಗಿದ್ದವರನ್ನು ಕೂಡಲೇ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಣಿಪಾಲ ಕೆ. ಎಂ. ಸಿ ಆಸ್ಪತ್ರೆಗೆ ಕರೆದು ಹೋದಾಗ ವೈದ್ಯರು ಪರೀಕ್ಷಿಸಿ ಮಹೇಶರವರು ಮೃತಪಟ್ಟಿರುವುದಾಗಿ ತಿಳಿಸಿದರು.

ಕೈಗೆ ಗಾಯದ ಬಬಿತಾ ಅವರು ಅ. 22 ರಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಈ ಬಗ್ಗೆ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.

ಕಾರು ಚಾಲಕ ಚೇತನ್ ರಾಜ್ ಎಂಬವರ ಮೇಲೆ ವೇಣೂರು ಪೊಲೀಸ್ ಠಾಣಾ 70/2023 ಕಲಂ: 279, 337, 304(A) IPC ಕೇಸು ದಾಖಲಾಗಿದೆ.

Related posts

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya

ಬೆಳ್ತಂಗಡಿ:ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾವು

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya
error: Content is protected !!