September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ಒಂದು ದಿನದ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ ಯು ಗ್ರಾಮ ಪಂಚಾಯತ್ ಉಜಿರೆ ಯ ಸಂಜೀವಿನಿ ಸಭಾಭವನದಲ್ಲಿ ಅ. 22 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ ನೆರವೇರಿಸಿ ಕಾರ್ಯಕ್ರಮವನ್ನ ಉದ್ದೇಶಿಸಿ ಸೇವಾ ಟ್ರಸ್ಟ್ ನ “ಬನ್ನಿ ಕೈ ಜೋಡಿಸಿ ಅಶಕ್ತರಿಗೆ ಆಸರೆಯಾಗೋಣ ” ಎಂಬ ಸಂದೇಶವು ಪ್ರತೀಯೊಬ್ಬರಲ್ಲು ಮನಮುಟ್ಟುವ ರೀತಿಯಲ್ಲಿದೆ ಇಂತಹ ಸೇವೆಮಾಡುವ ಟ್ರಸ್ಟ್ ಗಳಿಗೆ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹಿತವಚನಗಳನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಜಿರೆಯ ಮಾಜಿ ಅದ್ಯಕ್ಷ ಶ್ರೀನಿವಾಸ್ ಕೆ , ಗ್ರಾಮ ಪಂಚಾಯತ್ ಉಜಿರೆಯ ಸಿಬ್ಬಂದಿ ನಾಗೇಶ್ ಪೆರ್ಲ, ಕರಿಗಂಧ ಸೇವಾ ಟ್ರಸ್ಟ್ ನ ಸಂಚಾಲಕರಾದ ಕಿರಣ್ ಉಜಿರೆ ತರಬೇತಿಯನ್ನು ಉದ್ದೇಶಿಸಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿಯ ನಂತರದ ಅಣಬೆ ಬೆಳೆಯುವುದು ಮತ್ತು ಮಾರಾಟದ ವ್ಯವಸ್ಥೆಯನ್ನು ಟ್ರಸ್ಟ್ ನ ಮೂಲಕ ನಡೆಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಭರತ್, ಉಜಿರೆ ಗ್ರಾಮ ಪಂಚಾಯತ್ ನ ಸದಸ್ಯ ದಿನೇಶ್ ಉಜಿರೆ ಮೈತ್ರಿ ಫ್ರೆಂಡ್ಸ್ ಕ್ಲಬ್ ಗಾಂಧಿನಗರದ ಅದ್ಯಕ್ಷರಾದ ರವಿ ಜೆ ಯವರು ಹಾಗೂ ಅಣಬೆ ಬೇಸಾಯ ತರಬೇತಿಯ ತರಬೇತುದಾರರಾದ ಸುಲೈಮಾನ್ ಬೆಳಾಲು ರವರು ಉಪಸ್ಥಿತರಿದ್ದರು .

ವಿಟ್ಲ,ಪುತ್ತೂರು,ಕಾರ್ಕಳ, ಮೂಡುಬಿದಿರೆ, ಬೆಳ್ತಂಗಡಿ, ಹೀಗೆ ನಾನಾ ಊರಿನ ಆಸಕ್ತರು ತರಬೇತಿಯ ಸದುಪಯೋಗ ಪಡೆದುಕೊಂಡರು.

Related posts

ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ

Suddi Udaya

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪದವಿ ಪೂರ್ವ ವಿಭಾಗದ ಕಂಪ್ಯೂಟರ್ ವಿಭಾಗದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!