July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ಒಂದು ದಿನದ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ ಯು ಗ್ರಾಮ ಪಂಚಾಯತ್ ಉಜಿರೆ ಯ ಸಂಜೀವಿನಿ ಸಭಾಭವನದಲ್ಲಿ ಅ. 22 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ ನೆರವೇರಿಸಿ ಕಾರ್ಯಕ್ರಮವನ್ನ ಉದ್ದೇಶಿಸಿ ಸೇವಾ ಟ್ರಸ್ಟ್ ನ “ಬನ್ನಿ ಕೈ ಜೋಡಿಸಿ ಅಶಕ್ತರಿಗೆ ಆಸರೆಯಾಗೋಣ ” ಎಂಬ ಸಂದೇಶವು ಪ್ರತೀಯೊಬ್ಬರಲ್ಲು ಮನಮುಟ್ಟುವ ರೀತಿಯಲ್ಲಿದೆ ಇಂತಹ ಸೇವೆಮಾಡುವ ಟ್ರಸ್ಟ್ ಗಳಿಗೆ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹಿತವಚನಗಳನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಜಿರೆಯ ಮಾಜಿ ಅದ್ಯಕ್ಷ ಶ್ರೀನಿವಾಸ್ ಕೆ , ಗ್ರಾಮ ಪಂಚಾಯತ್ ಉಜಿರೆಯ ಸಿಬ್ಬಂದಿ ನಾಗೇಶ್ ಪೆರ್ಲ, ಕರಿಗಂಧ ಸೇವಾ ಟ್ರಸ್ಟ್ ನ ಸಂಚಾಲಕರಾದ ಕಿರಣ್ ಉಜಿರೆ ತರಬೇತಿಯನ್ನು ಉದ್ದೇಶಿಸಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿಯ ನಂತರದ ಅಣಬೆ ಬೆಳೆಯುವುದು ಮತ್ತು ಮಾರಾಟದ ವ್ಯವಸ್ಥೆಯನ್ನು ಟ್ರಸ್ಟ್ ನ ಮೂಲಕ ನಡೆಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಭರತ್, ಉಜಿರೆ ಗ್ರಾಮ ಪಂಚಾಯತ್ ನ ಸದಸ್ಯ ದಿನೇಶ್ ಉಜಿರೆ ಮೈತ್ರಿ ಫ್ರೆಂಡ್ಸ್ ಕ್ಲಬ್ ಗಾಂಧಿನಗರದ ಅದ್ಯಕ್ಷರಾದ ರವಿ ಜೆ ಯವರು ಹಾಗೂ ಅಣಬೆ ಬೇಸಾಯ ತರಬೇತಿಯ ತರಬೇತುದಾರರಾದ ಸುಲೈಮಾನ್ ಬೆಳಾಲು ರವರು ಉಪಸ್ಥಿತರಿದ್ದರು .

ವಿಟ್ಲ,ಪುತ್ತೂರು,ಕಾರ್ಕಳ, ಮೂಡುಬಿದಿರೆ, ಬೆಳ್ತಂಗಡಿ, ಹೀಗೆ ನಾನಾ ಊರಿನ ಆಸಕ್ತರು ತರಬೇತಿಯ ಸದುಪಯೋಗ ಪಡೆದುಕೊಂಡರು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಅಳದಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!