23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ಒಂದು ದಿನದ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ ಯು ಗ್ರಾಮ ಪಂಚಾಯತ್ ಉಜಿರೆ ಯ ಸಂಜೀವಿನಿ ಸಭಾಭವನದಲ್ಲಿ ಅ. 22 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ ನೆರವೇರಿಸಿ ಕಾರ್ಯಕ್ರಮವನ್ನ ಉದ್ದೇಶಿಸಿ ಸೇವಾ ಟ್ರಸ್ಟ್ ನ “ಬನ್ನಿ ಕೈ ಜೋಡಿಸಿ ಅಶಕ್ತರಿಗೆ ಆಸರೆಯಾಗೋಣ ” ಎಂಬ ಸಂದೇಶವು ಪ್ರತೀಯೊಬ್ಬರಲ್ಲು ಮನಮುಟ್ಟುವ ರೀತಿಯಲ್ಲಿದೆ ಇಂತಹ ಸೇವೆಮಾಡುವ ಟ್ರಸ್ಟ್ ಗಳಿಗೆ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹಿತವಚನಗಳನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಜಿರೆಯ ಮಾಜಿ ಅದ್ಯಕ್ಷ ಶ್ರೀನಿವಾಸ್ ಕೆ , ಗ್ರಾಮ ಪಂಚಾಯತ್ ಉಜಿರೆಯ ಸಿಬ್ಬಂದಿ ನಾಗೇಶ್ ಪೆರ್ಲ, ಕರಿಗಂಧ ಸೇವಾ ಟ್ರಸ್ಟ್ ನ ಸಂಚಾಲಕರಾದ ಕಿರಣ್ ಉಜಿರೆ ತರಬೇತಿಯನ್ನು ಉದ್ದೇಶಿಸಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿಯ ನಂತರದ ಅಣಬೆ ಬೆಳೆಯುವುದು ಮತ್ತು ಮಾರಾಟದ ವ್ಯವಸ್ಥೆಯನ್ನು ಟ್ರಸ್ಟ್ ನ ಮೂಲಕ ನಡೆಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಭರತ್, ಉಜಿರೆ ಗ್ರಾಮ ಪಂಚಾಯತ್ ನ ಸದಸ್ಯ ದಿನೇಶ್ ಉಜಿರೆ ಮೈತ್ರಿ ಫ್ರೆಂಡ್ಸ್ ಕ್ಲಬ್ ಗಾಂಧಿನಗರದ ಅದ್ಯಕ್ಷರಾದ ರವಿ ಜೆ ಯವರು ಹಾಗೂ ಅಣಬೆ ಬೇಸಾಯ ತರಬೇತಿಯ ತರಬೇತುದಾರರಾದ ಸುಲೈಮಾನ್ ಬೆಳಾಲು ರವರು ಉಪಸ್ಥಿತರಿದ್ದರು .

ವಿಟ್ಲ,ಪುತ್ತೂರು,ಕಾರ್ಕಳ, ಮೂಡುಬಿದಿರೆ, ಬೆಳ್ತಂಗಡಿ, ಹೀಗೆ ನಾನಾ ಊರಿನ ಆಸಕ್ತರು ತರಬೇತಿಯ ಸದುಪಯೋಗ ಪಡೆದುಕೊಂಡರು.

Related posts

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya

ವೇಶ್ಯಾವಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ

Suddi Udaya

ವಿಪರೀತ ಶಬ್ಧ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಸೈಲೆನ್ಸರನ್ನು ರೋಲ‌ರ್ ಮೂಲಕ ನಾಶ ಮಾಡಿದ ಬೆಳ್ತಂಗಡಿ ಸಂಚಾರ ಪೊಲೀಸರು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya
error: Content is protected !!